Advertisement

ಮಹಾರಾಷ್ಟ್ರ ಸ್ಥಳೀಯ ಚುನಾವಣೆ: ಶಿವಸೇನೆ-ಬಿಜೆಪಿ ಮೈತ್ರಿ

10:54 PM Sep 02, 2022 | Team Udayavani |

ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ನೇತೃತ್ವದ ಶಿವಸೇನೆ ಬಣ ಮತ್ತು ಬಿಜೆಪಿ ಮೈತ್ರಿಕೂಟವು ಜಂಟಿಯಾಗಿ ಸ್ಥಳೀಯ ಚುನಾವಣೆಯನ್ನು ಎದುರಿಸಲಿವೆ ಎಂದು ಮಹಾರಾಷ್ಟ್ರ ಬಿಜೆಪಿ ಅಧ್ಯಕ್ಷ ಚಂದ್ರಶೇಖರ್‌ ಬಾವಂಕುಲೆ ತಿಳಿಸಿದರು.

Advertisement

“ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಗ್ರಾಮ ಪಂಚಾಯತಿ, ಜಿಲ್ಲಾ ಪಂಚಾಯತಿ ಸೇರಿದಂತೆ ಎಲ್ಲ ಚುನಾವಣೆಗಳಲ್ಲಿ ಮೈತ್ರಿಕೂಟದ ಅಭ್ಯರ್ಥಿಗಳು ಜಯಶಾಲಿಯಾಗಲಿದ್ದಾರೆ,” ಎಂದು ಬಾವಂಕುಲೆ ಭರವಸೆ ವ್ಯಕ್ತಪಡಿಸಿದರು.

“ಬಿಜೆಪಿಯ ಮಿಷನ್‌ 2024ರ ಭಾಗವಾಗಿ ಕೇಂದ್ರ ಸಚಿವರು ಲೋಕಸಭಾ ಕ್ಷೇತ್ರಗಳಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಲಿದ್ದಾರೆ. ಅದೇ ರೀತಿ ಆರು ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿರುವ ಚಂದ್ರಾಪುರ್‌ ಲೋಕಸಭೆ ಕ್ಷೇತ್ರಕ್ಕೆ ಕೇಂದ್ರ ಸಚಿವ ಹರ್ದೀಪ್ ಸಿಂಗ್‌ ಪುರಿ ಅವರು ಸೆ.22 ಮತ್ತು 23ರಂದು ಭೇಟಿ ನೀಡಲಿದ್ದಾರೆ,” ಎಂದು ಮಾಹಿತಿ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next