Advertisement

ಭವಾನಿಪುರದಲ್ಲಿ ಅಂತಿಮ ಹಂತದ ಪ್ರಚಾರ:ಬಿಜೆಪಿ-ಟಿಎಂಸಿ ಘರ್ಷಣೆ

03:31 PM Sep 27, 2021 | Team Udayavani |

ಕೋಲ್ಕತಾ : ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕಣಕ್ಕಿಳಿದಿರುವ ಭಾವಾನಿಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾವು ತೀವ್ರವಾಗಿದ್ದು, ಸೋಮವಾರ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ. ಕ್ಷೇತ್ರದ ಎಲ್ಲೆಡೆ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದ್ದು , ಬಿಜೆಪಿ ಮತ್ತು ಟಿಎಂಸಿ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿರುವ ಬಗ್ಗೆ ವರದಿಯಾಗಿದೆ.

Advertisement

ಟಿಎಂಸಿಯ ಭದ್ರ ಕೋಟೆಯಾಗಿರುವ ಕ್ಷೇತ್ರದಲ್ಲಿ ಬಿಜೆಪಿ ನಾಯಕರು ಭರ್ಜರಿ ಪ್ರಚಾರ ಕೈಗೊಂಡಿದ್ದಿದ್ದು, ಈ ವೇಳೆ ನಾಯಕರ ವಿರುದ್ಧ ಘೋಷಣೆ ಕೂಗಿರುವುದು ಮತ್ತು ಪ್ರಚಾರಕ್ಕೆ ಅಡ್ಡಿ ಪಡಿಸಿರುವ ಬಗ್ಗೆ ಆರೋಪಿಸಲಾಗಿದೆ.

ಬಿಜೆಪಿ ನಾಯಕ ದಿಲೀಪ್ ಘೋಷ್ ಅವರ ಮೇಲೆ ಹಲ್ಲೆಗೆ ಯತ್ನಿಸಲಾಗಿದೆ ಮತ್ತು ಭದ್ರತಾ ಸಿಬಂದಿಯ ಗನ್ ಕಸಿದುಕೊಳ್ಳಲು ಟಿಎಂಸಿ ಕಾರ್ಯಕರ್ತರು ಯತ್ನಿಸಿದ್ದಾರೆ ಎಂದು ಬಿಜೆಪಿ ನಾಯಕ ಅಮಿತ್ ಮಾಳವೀಯ ಹೇಳಿಕೆ ನೀಡಿದ್ದಾರೆ

ಕೆಲವೆಡೆ ಬಿಜೆಪಿ ಮತ್ತು ಟಿಎಂಸಿ ಕಾರ್ಯಕರ್ತರು ಕೈ ಕೈ ಮಿಲಾಯಿಸಿಕೊಂಡಿರುವ ಬಗ್ಗೆ ವರದಿಯಾಗಿದೆ.

ಬಿಜೆಪಿ ಅಭ್ಯರ್ಥಿ ಪ್ರಿಯಾಂಕಾ ಟಿಬ್ರವಾಲ್ ಅವರೂ ಕ್ಷೇತ್ರದೆಲ್ಲೆಡೆ ಬಿಜೆಪಿ ಕಾರ್ಯಕರ್ತರೊಂದಿಗೆ ಬಿರುಸಿನ ಅಂತಿಮ ಹಂತದ ಪ್ರಚಾರ ನಡೆಸುತ್ತಿದ್ದಾರೆ.

Advertisement

ಸೆಪ್ಟೆಂಬರ್ 30 ರಂದು ಮತದಾನ ನಡೆಯಲಿದ್ದು, ಅಕ್ಟೋಬರ್ 3 ರಂದು ಮತ ಎಣಿಕೆ ಕಾರ್ಯ ನಡೆಯಲಿದೆ.ಕ್ಷೇತ್ರದೆಲ್ಲೆಡೆ ಬಿಗಿ ಪೋಲಿಸ್ ಭದ್ರತೆ ಕೈಗೊಳ್ಳಲಾಗಿದೆ .

2011 ಮತ್ತು 2016 ರಲ್ಲಿ ಮಮತಾ ಬ್ಯಾನರ್ಜಿ ಅವರು ಭಾವಾನಿಪುರ ಕ್ಷೇತ್ರದಲ್ಲಿ ಭರ್ಜರಿ ಜಯ ಸಾಧಿಸಿದ್ದರು.

2021 ರ ಚುನಾವಣೆಯಲ್ಲಿ ನಂದಿಗ್ರಾಮದಲ್ಲಿ ತನ್ನ ಮಾಜಿ ಆಪ್ತ, ಬಿಜೆಪಿ ಅಭ್ಯರ್ಥಿಯಾಗಿದ್ದ ಸುವೇಂದು ಅಧಿಕಾರಿ ವಿರುದ್ಧ ಸೋಲು ಅನುಭವಿಸಿದ ಕಾರಣ ಈ ಉಪ ಚುನಾವಣಾ ನಡೆಯುತ್ತಿದೆ. ಮಮತಾ ಅವರಿಗಾಗಿ ಟಿಎಂಸಿ ಶಾಸಕ ಶೋಭನ್ ದೇವ್ ಚಟ್ಟೋಪಾಧ್ಯಾಯ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next