Advertisement

ಪ.ಬಂಗಾಳ ಹಿಂಸಾಚಾರ : ನಾಳೆ ದೇಶಾದ್ಯಂತ ಬಿಜೆಪಿ ಧರಣಿ

10:46 AM May 04, 2021 | Team Udayavani |

ಕೊಲ್ಕತ್ತಾ : ಚುನಾವಣಾ ಫಲಿತಾಂಶದ ದಿನ(ಭಾನುವಾರ) ಪಶ್ಚಿಮ ಬಂಗಾಳದಲ್ಲಿ ನಡೆದ ಹಿಂಸಾಚಾರವನ್ನು ಖಂಡಿಸಿ ದೇಶದಾದ್ಯಂತ ಮೇ 5 ರಂದು ಧರಣಿ ಮಾಡುವುದಾಗಿ ಬಿಜೆಪಿ ತಿಳಿಸಿದೆ. ಪಕ್ಷದ ಎಲ್ಲಾ ಸಾಂಸ್ಥಿಕ ಮಂಡಳಿಗಳಲ್ಲಿ ಕೋವಿಡ್ ನಿಯವನ್ನು ಪಾಲಿಸಿ ಈ ಪ್ರತಿಭಟನೆ ನಡೆಯಲಿದೆ ಎಂದು ತಿಳಿಸಲಾಗಿದೆ.

Advertisement

ಈ ನಡುವೆ ತಮ್ಮ ಪಕ್ಷದ ಕಾರ್ಯಕರ್ತರ ಕುಟುಂಬಗಳನ್ನು ಭೇಟಿ ಮಾಡಲು ಬಿಜೆಪಿಯ ರಾಷ್ಟ್ರೀಯ ಮುಖ್ಯಸ್ಥ ಜೆ.ಪಿ.ನಡ್ಡಾ ಅವರು ಇಂದು ಮತ್ತು ನಾಳೆ ( ಮೇ 4 ಮತ್ತು 5) ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಲಿದ್ದಾರೆ.

ಭಾನುವಾರ ಹೊರಬಿದ್ದ ಚುನಾವಣಾ ಫಲಿತಾಂಶದಲ್ಲಿ ತೃಣ ಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷ ಗೆಲುವನ್ನು ಸಾಧಿಸಿದೆ ಎಂದ ತಕ್ಷಣ ಟಿಎಂಸಿ ಕಾರ್ಯಕರ್ತರು ರಾಜ್ಯದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಹಿಂಸಾಚಾರ ಮಾಡಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.

ಇನ್ನು ಪಶ್ಚಿಮ ಬಂಗಾಳದಲ್ಲಿ ನಡೆದಿರುವ ಹಿಂಸಾಚಾರ ಕುರಿತಂತೆ ಕೇಂದ್ರ ಗೃಹ ಸಚಿವಾಲಯ ಪಶ್ಚಿಮ ಬಂಗಾಳ ಸರ್ಕಾರದಿಂದ ವರದಿ ಕೇಳಿದೆ.

Advertisement

Udayavani is now on Telegram. Click here to join our channel and stay updated with the latest news.

Next