Advertisement

BJP; ಶಿಗ್ಗಾವಿಯಲ್ಲಿ ನಾಮಪತ್ರ ಸಲ್ಲಿಸಿದ ಭರತ್ ಬೊಮ್ಮಾಯಿ

08:17 PM Oct 24, 2024 | Team Udayavani |

ಶಿಗ್ಗಾವಿ: ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಅವರು ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಗುರುವಾರ(ಅ24) ಅಧಿಕೃತವಾಗಿ ನಾಮಪತ್ರ ಸಲ್ಲಿಸಿದರು.

Advertisement

ಕ್ಷೇತ್ರದಲ್ಲಿ ಹಿಡಿತವಿರುವ ಭರತ್ ಅವರು ಪಕ್ಷದ ಸ್ಥಳೀಯನಾಯಕರೊಂದಿಗೆ ತೆರಳಿ ನಾಮಪತ್ರ ಸಲ್ಲಿಸಿದರು. ಭರ್ಜರಿ ಪ್ರಚಾರವನ್ನು, ಸರಣಿ ಸಭೆಗಳನ್ನು ನಡೆಸುತ್ತಿದ್ದಾರೆ.

ಗೆಲ್ಲುವ ಅಭ್ಯರ್ಥಿ

ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಮಾಜಿ ಸಿಎಂ‌ಬಿ.ಎಸ್.ಯಡಿಯೂರಪ್ಪ ”ಹಿಂದೆಯೇ ಬಸವರಾಜ ಬೊಮ್ಮಾಯಿ ಅವರು ಶಿಗ್ಗಾವಿ ಕ್ಷೇತ್ರಕ್ಕೆ ತಮ್ಮ ಪುತ್ರನಿಗೆ ಟಿಕೆಟ್ ಬೇಡ ಎಂದು ಹೇಳಿದ್ದರು. ಆದರೆ ಸಮೀಕ್ಷೆ ಪ್ರಕಾರ ಅವರು ಗೆಲ್ಲುವ ಅಭ್ಯರ್ಥಿ ಎನ್ನುವ ಕಾರಣಕ್ಕೆ ಅವರಿಗೆ ಟಿಕೆಟ್ ಕೊಡುವುದಾಗಿ ಪಕ್ಷದ ಹೈಕಮಾಂಡ್ ನಾಯಕರು ತೀರ್ಮಾನಿಸಿದ್ದಾರೆ. ಅವರು ಕೈಗೊಂಡಿರುವ ನಿರ್ಧಾರಕ್ಕೆ ನಾವೆಲ್ಲ ಬದ್ಧರಾಗಿದ್ದೇವೆ” ಎಂದರು.

ಮೂರೂ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲುತ್ತದೆ. ನಮ್ಮ ಪಕ್ಷದಿಂದ ಯಾರೇ ನಿಂತರೂ ಗಲ್ಲುತ್ತಾರೆ. ಪ್ರಧಾನಿ ನರೇಂದ್ರ ಮೋದಿ ಅವರ ವರ್ಚಸ್ಸು ಗೆಲುವಿಗೆ ಕಾರಣವಾಗಲಿದೆ‌. ಚನ್ನಪಟ್ಟಣದಲ್ಲಿ ಕೂಡ ಒಳ್ಳೆಯ ವಾತಾವರಣವಿದೆ. ಪಕ್ಷಕ್ಕೆ ದ್ರೋಹ ಮಾಡಿದವರಿಗೆ ಜನರೇ ಪಾಠ ಕಲಿಸಲಿದ್ದಾರೆ ಎಂದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next