Advertisement

BJP; ನಾನೇ ಲೀಡರ್ ಎಂಬ ಸಂದೇಶ ರವಾನಿಸಲು ಬಿ.ಎಲ್‌.ಸಂತೋಷ್‌ ಸಭೆ: ಕಾಂಗ್ರೆಸ್ ವ್ಯಂಗ್ಯ

04:10 PM Aug 31, 2023 | Team Udayavani |

ಬೆಂಗಳೂರು: ಮತದಾರರ ಮಹಾಚೇತನ ಅಭಿಯಾನಕ್ಕೆ ಸಂಬಂಧಪಟ್ಟಂತೆ ಬಿಜೆಪಿ ರಾಷ್ಟ್ರೀಯ ಸಂಘಟನ ಪ್ರಧಾನ ಕಾರ್ಯದರ್ಶಿ ಬಿ.ಎಲ್‌. ಸಂತೋಷ್‌ ಅವರು ಬಿಜೆಪಿ ಪ್ರಮುಖರ ಜತೆಗೆ ಗುರುವಾರ ಸಭೆ ನಡೆಸುತ್ತಿರುವುದಕ್ಕೆ ಕಾಂಗ್ರೆಸ್ ವ್ಯಂಗ್ಯವಾಗಿ ಪ್ರತಿಕ್ರಿಯಿಸಿದ್ದು, ”ನಾನೇ ಲೀಡರ್ ಎಂಬ ಸಂದೇಶ ರವಾನಿಸಲು ಸಭೆ ನಡೆಸಿದ್ದಾರೆ” ಎಂದು ಟೀಕಿಸಿದೆ.

Advertisement

”ಇತ್ತೀಚಿಗೆ ಬಿಜೆಪಿಯ ಶಾಸಕರು ಯಡಿಯೂರಪ್ಪನವರ ಮನೆಯಲ್ಲಿ ಸಭೆ ಸೇರಿ ನೀವೇ ನಾಯಕತ್ವ ವಹಿಸಿಕೊಳ್ಳಬೇಕು ಎಂದು ಆಗ್ರಹಿಸಿದ್ದರು.ಬಿಜೆಪಿ ಶಾಸಕರೆಲ್ಲ ಯಡಿಯೂರಪ್ಪ ಅವರ ಹಿಂದೆ ಹೋಗಿದ್ದೇ ತಡ ಕುಪಿತರಾದ ಬಿ.ಎಲ್.ಸಂತೋಷ್ ನಾನೇ ಲೀಡರ್ ಎಂಬ ಸಂದೇಶ ರವಾನಿಸಲು ಸಭೆ ನಡೆಸಿದ್ದಾರೆ!. ಚುನಾವಣೆಯ ತಂತ್ರಗಾರಿಕೆ ಮಕಾಡೆ ಮಲಗಿ ಹೀನಾಯ ಸೋಲು ಅನುಭವಿಸಿದಾಗ ಇದೇ ಸಂತೋಷ್ ಗಂಟು ಮೂಟೆ ಕಟ್ಟಿಕೊಂಡು ನಾಪತ್ತೆಯಾಗಿದ್ದರು, ಈಗ ಯಡಿಯೂರಪ್ಪ ಅವರಿಗೆ ಸೆಡ್ಡು ಹೊಡೆಯಲು ಮತ್ತೆ ಪ್ರತ್ಯಕ್ಷರಾಗಿ ಸಭೆ ನಡೆಸಿದ್ದಾರೆ.ಅದೇನೇ ಮಾಡಿದರೂ ಬಿಜೆಪಿಗೆ ಮತ್ತೆ ಜೀವ ಬರುವುದಿಲ್ಲ!” ಎಂದು ಕಾಂಗ್ರೆಸ್ ಎಕ್ಸ್ ನಲ್ಲಿ ಪೋಸ್ಟ್ ಮಾಡಿದೆ.

ಬಿ.ಎಲ್‌.ಸಂತೋಷ್‌ ನೇತೃತ್ವದ ಸಭೆಯಲ್ಲಿ ಸಂಸದರು, ಶಾಸಕರು, ಪರಿಷತ್‌ ಸದಸ್ಯರು, ಹಿರಿಯ ನಾಯಕರು, ಪರಾಜಿತ ಅಭ್ಯರ್ಥಿಗಳು ಸಭೆಯಲ್ಲಿ ಭಾಗಿಯಾಗಿದ್ದು,ಕೆಲವರು ಗೈರಾಗಿರುವ ಬಗ್ಗೆಯೂ ಚರ್ಚೆಯೂ ತೀವ್ರವಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next