Advertisement

ಪ್ರತಿ ಪ್ರಜೆಯ ಮೇಲೆ 44 ಸಾವಿರಕ್ಕೂ ಅಧಿಕ ಸಾಲದ ಹೊರೆ!:’ಬುರುಡೆರಾಮಯ್ಯ’ಎಂದ ಬಿಜೆಪಿ

05:25 PM Oct 23, 2021 | Team Udayavani |

ಬೆಂಗಳೂರು : ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ರಾಜ್ಯ ಬಿಜೆಪಿ ಶನಿವಾರ ಸರಣಿ ಟ್ವೀಟ್ ಗಳನ್ನು ಮಾಡುವ ಮೂಲಕ ಬುರುಡೆರಾಮಯ್ಯ ಎಂದು ಕರೆದಿದೆ.

Advertisement

”ರಾಜ್ಯ ಏಕೀಕರಣಗೊಂಡ ಬಳಿಕ 2013 ರ ಅಂತ್ಯದ ವೇಳೆಗೆ ರಾಜ್ಯದ ಒಟ್ಟು ಸಾಲ ಎತ್ತುವಳಿ 1 ಲಕ್ಷ ಕೋಟಿ ಮಾತ್ರ.ಆದರೆ ಸಿದ್ದರಾಮಯ್ಯ ಹಾಗೂ ಮೈತ್ರಿ ಸರ್ಕಾರದ ಅವಧಿಯಲ್ಲಿ ಈ ಮೊತ್ತ 3 ಲಕ್ಷ ಕೋಟಿ ತಲುಪಿತು.ಈಗ ಹೇಳಿ ರಾಜ್ಯಕ್ಕೆ ಸಾಲಭಾಗ್ಯ ನೀಡಿದ್ದು ಯಾರು ಸಿದ್ದರಾಮಯ್ಯ? ನಿಮ್ಮ ಆರ್ಥಿಕತೆಗೆ ನೊಬೆಲ್ ಪ್ರಶಸ್ತಿಯೇ ಕೊಡಬೇಕು! ಬುರುಡೆರಾಮಯ್ಯ” ಎಂದು ಟ್ವೀಟ್ ಮಾಡಿದೆ.

”ಸಿದ್ದರಾಮಯ್ಯ ಅಧಿಕಾರದಲ್ಲಿದ್ದಾಗ ಮಾಡಿದ ಅತಿದೊಡ್ಡ ಸಾಧನೆ ಎಂದರೆ ರಾಜ್ಯದ ಪ್ರತಿಯೊಬ್ಬ ಪ್ರಜೆಯ ತಲೆಯ ಮೇಲೂ 44 ಸಾವಿರಕ್ಕೂ ಅಧಿಕ ಸಾಲದ ಹೊರೆ ಹೇರಿದ್ದು.ಅಕ್ಕಿ ಕೊಟ್ಟೆ, ಎಣ್ಣೆ ಕೊಟ್ಟೆ ಎಂದು ರಾಜ್ಯದ ಜನತೆಯ ಮೇಲೆ ಮಂಕು ಬೂದಿ ಎರಚುತ್ತಾ ಎಲ್ಲರನ್ನೂ ಸಾಲದ ಸುಳಿಗೆ ದೂಡಿಬಿಟ್ಟರು. ವಿತ್ತೀಯ ಶಿಸ್ತನ್ನೇ ಹದೆಗೆಡಿಸಿದರು.”

”ಸಾಲ ಮಾಡಿಯಾದರೂ ತುಪ್ಪ ತಿನ್ನಬೇಕೆಂಬ #ಮಜಾವಾದಿ ರಾಜಕಾರಣಿಗಳ ಪಟ್ಟಿಯಲ್ಲಿ ಮೊದಲ ಶ್ರೇಣಿಯಲ್ಲಿ ನಿಲ್ಲುವವರು ಸಿದ್ದರಾಮಯ್ಯ. ತಾವು ಮುಖ್ಯಮಂತ್ರಿಯಾಗಿದ್ದಾಗ ಕೇವಲ 4 ವರ್ಷದ ಅವಧಿಯಲ್ಲಿ ಸಾಲ ಎತ್ತುವಳಿಯನ್ನು 4 ಲಕ್ಷ ಕೋಟಿಗೆ ತಲುಪಿಸಿದ್ದೇ ಸಿದ್ದರಾಮಯ್ಯ ಸಾಧನೆ” ಎಂದು ಬರೆದಿದೆ.

”ಅಧಿಕಾರಾವಧಿಯ ಕೊನೆಯಲ್ಲಿ “ಮುಖ್ಯಮಂತ್ರಿ 1 ಲಕ್ಷ ಮನೆ” ಯೋಜನೆಯನ್ನು ಬೆಂಗಳೂರು ನಗರದ ಬಡವರಿಗೆ ಸಿದ್ದರಾಮಯ್ಯ ಘೋಷಣೆ ಮಾಡಿದ್ದರು. ಆದರೆ ಬಜೆಟ್‌ನಲ್ಲಿ ಸೂಕ್ತ ಅನುದಾನ ಕಾಯ್ದಿರಿಸಲಿಲ್ಲ. ಮನೆಕಟ್ಟುವುದಕ್ಕೆ ಆಯ್ದುಕೊಂಡ ಜಾಗವೇ ವಿವಾದಗ್ರಸ್ಥವಾಗಿತ್ತು. ಸುಳ್ಳು ಹೇಳುವುದರಲ್ಲಿ ಸಿದ್ದರಾಮಯ್ಯಗೆ ಪಿಎಚ್‌ಡಿ ನೀಡಬಹುದು.”

Advertisement

”ಇನ್ನೆಷ್ಟು ದಿನ ಸಂತೆ ಭಾಷಣ ಹೊಡೆಯುತ್ತೀರಿ ? ನೀವು ಘೋಷಣೆ ಮಾಡಿದ 15 ಲಕ್ಷ ಮನೆ ಎಲ್ಲಿದೆ? ಭೂಮಿಯ ಮೇಲಿದೆಯೋ, ಮಂಗಳ ಗ್ರಹದಲ್ಲಿದೆಯೋ? ಕೇವಲ ಘೋಷಣೆ ಮಾಡಿದ ಮಾತ್ರಕ್ಕೆ ಮನೆ ನಿರ್ಮಾಣವಾಗುತ್ತದೆಯೇ? ಮಂತ್ರಕ್ಕೆ ಮಾವಿನ ಕಾಯಿ ಉದುರುತ್ತದೆಯೇ?” ಎಂದು ಬಿಜೆಪಿ ಪ್ರಶ್ನೆಗಳ ಸುರಿಮಳೆ ಗೈದಿದೆ.

Advertisement

Udayavani is now on Telegram. Click here to join our channel and stay updated with the latest news.

Next