Advertisement

ರಸ್ತೆ ದಾಟುವ ವೇಳೆ ಬಿಜೆಪಿ ಪ್ರಚಾರ ವಾಹನ ಢಿಕ್ಕಿ: ವ್ಯಕ್ತಿ ಮೃತ್ಯು

09:47 PM Apr 28, 2023 | Team Udayavani |

ಚಿಕ್ಕಬಳ್ಳಾಪುರ: ರಸ್ತೆ ದಾಟುವ ವೇಳೆ ಬಿಜೆಪಿ ಪ್ರಚಾರ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮವಾಗಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.

Advertisement

ಚಿಕ್ಕಬಳ್ಳಾಪುರ ‌ನಗರದ ಹಳೆ ಎಸ್ಪಿ ಕಚೇರಿಯ ಮುಂಭಾಗದ ರಸ್ತೆಯಲ್ಲಿ ಶುಕ್ರವಾರ ರಾತ್ರಿ 7.30 ರ ಸಂದರ್ಭದಲ್ಲಿ ಈ ಘಟನೆ ನಡೆದಿದೆ.

ಮೃತ ವ್ಯಕ್ತಿಯ ವಿವರ ತಿಳಿದು ಬಂದಿಲ್ಲ. ಬಿಜೆಪಿ ಪ್ರಚಾರ ವಾಹನ ಢಿಕ್ಕಿ ಹೊಡೆದು ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದರು. ಅಲ್ಲದೇ ಸ್ಥಳದಲ್ಲಿ ತೀವ್ರವಾಗಿ ರಕ್ತಸಾವ್ರವಾಗಿದೆ. ಕೂಡಲೇ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ಸಾಗಿಸಿದರೂ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ ಎಂದು ಸಂಚಾರಿ ಠಾಣೆಯ ಪೊಲೀಸರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next