Advertisement

ಬಿಜೆಪಿ ಅಭ್ಯರ್ಥಿ ಗೆಲುವಿಗೆ ಕಾರ್ಯತಂತ್ರ ಆರಂಭ: ಶಾಸಕ ರಘುಪತಿ ಭಟ್‌

12:32 AM Nov 27, 2022 | Team Udayavani |

ಉಡುಪಿ: ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆ ಸಂಬಂಧಿಸಿದಂತೆ ಪಕ್ಷ ಸಂಘಟನೆಯ ಕಾರ್ಯ ಮಾಡುತ್ತಿದ್ದೇವೆ. ಬಿಜೆಪಿ ಅಭ್ಯರ್ಥಿ ಗೆಲ್ಲಿಸುವ ನಿಟ್ಟಿನಲ್ಲಿ ಕಾರ್ಯತಂತ್ರಗಳು ಆರಂಭಿಸಿದ್ದೇವೆ. ಟಿಕೆಟ್‌ ನೀಡುವುದು ಪಕ್ಷದ ತೀರ್ಮಾನ.

Advertisement

ಪಕ್ಷ ನನಗೆ ಟಿಕೆಟ್‌ ನೀಡಿದರೆ ಪ್ರಮೋದ್‌ ಮಧ್ವರಾಜ್‌ ಅವರು ನನ್ನ ಪರವಾಗಿ ಚುನಾವಣ ಪ್ರಚಾರ ಮಾಡಲಿದ್ದಾರೆ. ಹಾಗೆಯೇ ಪ್ರಮೋದ್‌ ಮಧ್ವರಾಜ್‌ ಅವರಿಗೆ ಪಕ್ಷ ಟಿಕೆಟ್‌ ನೀಡಿದರೆ ನಾನು ಅವರ ಪರವಾಗಿ ಪ್ರಚಾರ ಮಾಡಲಿದ್ದೇನೆ ಎಂದು ಶಾಸಕ ಕೆ.ರಘುಪತಿ ಭಟ್‌ ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಬಿಜೆಪಿಯಲ್ಲಿ ಸಂಘಟನೆ ಹಾಗೂ ಚುನಾವಣೆಗೆ ಟಿಕೆಟ್‌ ಹಂಚಿಕೆ ಸಂಬಂಧ ವ್ಯವಸ್ಥಿತವಾದ ಪದ್ಧತಿಯಿದೆ. ಅದರಂತೆ ನಡೆಯಲಿದೆ. ಈವರೆಗೂ ಯಾರಿಗೂ ಮುಂಬರುವ ವಿಧಾನಸಭೆಯ ಟಿಕೆಟ್‌ ಘೋಷಣೆಯಾಗಿಲ್ಲ. ಆದರೆ, ಉಡುಪಿಯಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವಿಗೆ ಬೇಕಾದ ಪ್ರಚಾರ, ಪ್ರಯತ್ನ ಈಗಾಗಲೇ ಆರಂಭಿಸಿದ್ದೇವೆ.

ಕ್ಷೇತ್ರದಲ್ಲಿ ಸಮಾಜಮುಖಿ ಕಾರ್ಯವೂ ಅಷ್ಟೇ ವೇಗವಾಗಿ ನಡೆಯುತ್ತಿದೆ. ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಯಾರೇ ನಿಂತರು ಜಯ ಸಾಧಿಸಬೇಕು ಎಂದರು.

ಸರಕಾರಕ್ಕೆ ಪತ್ರ
ಸುರತ್ಕಲ್ ಟೋಲ್‌ ರದ್ದುಗೊಳಿಸಿ, ಅದನ್ನು ಹೆಜಮಾಡಿ ಟೋಲ್‌ನಲ್ಲಿ ಸಂಗ್ರಹ ಮಾಡುವುದು ಸರಿಯಲ್ಲ. ಈ ಬಗ್ಗೆ ಕೇಂದ್ರ ಹಾಗೂ ರಾಜ್ಯ ಸರಕಾರಕ್ಕೆ ಪತ್ರ ಕೂಡ ಬರೆಯಲಾಗುವುದು. ಇದರಿಂದ ಉಡುಪಿಯವರಿಗೆ ಸಾಕಷ್ಟು ಸಮಸ್ಯೆಯಾಗಲಿದೆ ಎಂದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next