Advertisement

Uttar Pradesh ಮೊರಾದಾಬಾದ್‌ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಿಧನ

08:53 AM Apr 21, 2024 | Team Udayavani |

ಲಕ್ನೋ: ಉತ್ತರ ಪ್ರದೇಶದ ಮೊರಾದಾಬಾದ್‌ ಲೋಕ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕುಂವರ್‌ ಸರ್ವೇಶ್‌ ಕುಮಾರ್‌ ಸಿಂಗ್‌ (72) ಶನಿ ವಾರ ಅನಾರೋಗ್ಯದಿಂದ ಮೃತ ಪಟ್ಟಿದ್ದಾರೆ. ಈ ಕ್ಷೇತ್ರದಲ್ಲಿ ಶುಕ್ರ ವಾರವಷ್ಟೇ ಮೊದಲ ಹಂತದ ಲೋಕಸಭೆ ಚುನಾವಣೆಗೆ ಮತ ದಾನ ನಡೆದಿತ್ತು.

Advertisement

ಬಿಜೆಪಿ ಉ.ಪ್ರ.ಮುಖ್ಯಸ್ಥ ಭೂಪೇಂದ್ರ ಚೌಧರಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. “ಕೆಲವು ಸಮಯದಿಂದ ಸರ್ವೇಶ್‌ ಗಂಟಲು ಸಂಬಂಧಿತ ಸಮಸ್ಯೆಯಿಂದ ಬಳಲುತ್ತಿದ್ದರು. ಅವರಿಗೆ ಶಸ್ತ್ರಚಿಕಿತ್ಸೆಯೂ ನಡೆದಿತ್ತು. ತಪಾಸಣೆಗಾಗಿ ಹೊಸದಿಲ್ಲಿಯ ಏಮ್ಸ್‌ಗೆ ತೆರಳಿದ್ದಾಗ ಮೃತಪಟ್ಟಿದ್ದಾರೆ ಎಂದಿದ್ದಾರೆ. ಸರ್ವೇಶ್‌ ಸಾವಿಗೆ ಉ.ಪ್ರ. ಸಿಎಂ ಯೋಗಿ ಆದಿತ್ಯನಾಥ ಸಂತಾಪ ಸೂಚಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next