Advertisement
ಈಗಾಗಲೇ ಉತ್ತರ ಮುಂಬಯಿ ಲೋಕಸಭಾ ಕ್ಷೇತ್ರದ 40ಕ್ಕೂ ಅಧಿಕ ವಾರ್ಡ್ಗಳಲ್ಲಿ ಪ್ರಚಾರ ಕಾರ್ಯ ಪೂರ್ಣಗೊಂಡಿದ್ದು, ಸೋಮವಾರ ಗೋರೈ ವಾರ್ಡ್ನಲ್ಲಿ ಮೊದಲ ಹಂತದ ಪ್ರಚಾರ ಕಾರ್ಯ ಕೊನೆಗೊಂಡಿತು. ದಿನಂಪ್ರತಿ ಬೆಳಗ್ಗೆ 9 ರಿಂದ ಮಧ್ಯಾಹ್ನ 1 ರವರೆಗೆ ಹಾಗೂ ಸಂಜೆ 5 ರಿಂದ ರಾತ್ರಿ 9 ರ ವರೆಗೆ ಸಂಸದ ಗೋಪಾಲ್ ಶೆಟ್ಟಿ ಅವರ ಉಪಸ್ಥಿತಿಯಲ್ಲಿ ಪ್ರಚಾರ ಕಾರ್ಯ ನಡೆಸಲಾಗುತ್ತಿದೆ. ಪ್ರಚಾರ ಕೈಗೊಂಡ ಎಲ್ಲಾ ಕ್ಷೇತ್ರಗಳಲ್ಲಿ ಉತ್ತಮ ಬೆಂಬಲ ವ್ಯಕ್ತವಾಗಿದೆ. ಕಳೆದ ಬಾರಿಗಿಂತ ಈ ಬಾರಿ ಗೋಪಾಲ್ ಶೆಟ್ಟಿ ಅವರು ಹೆಚ್ಚಿನ ಮತಗಳಿಂದ ಗೆಲುವು ಸಾಧಿಸುವ ವಿಶ್ವಾಸವಿದೆ ಎಂದು ಪ್ರಚಾರ ಸಮಿತಿಯ ಹಾಗೂ ಗೋಪಾಲ್ ಶೆಟ್ಟಿ ತುಳು-ಕನ್ನಡಿಗ ಅಭಿಮಾನಿ ಬಳಗದ ಸಂಚಾಲಕ ಎರ್ಮಾಳ್ ಹರೀಶ್ ಶೆಟ್ಟಿ ಅವರು ತಿಳಿಸಿದ್ದಾರೆ.
Related Articles
Advertisement
ಇನ್ನೊಂದೆಡೆ ಮೋದಿ ಅಲೆ ಗೋಪಾಲ್ ಶೆಟ್ಟಿ ಅವರ ಗೆಲುವಿನ ಅಂತರವನ್ನು ಮತ್ತಷ್ಟು ಹೆಚ್ಚಿಸುವಲ್ಲಿ ಸಂಶಯವಿಲ್ಲ ಎನ್ನಲಾಗುತ್ತಿದೆ. ಒಂದು ಕಾಲದಲ್ಲಿ ಉತ್ತರ ಮುಂಬಯಿ ಲೋಕಸಭಾ ಕ್ಷೇತ್ರ ಗುಜರಾತಿ ಸಮಾಜದವರು ಹೆಚ್ಚಿನ ಸಂಖ್ಯೆಯಲ್ಲಿರುವ ಪ್ರದೇಶವಾಗಿತ್ತು. ಆದರೆ ಪ್ರಸ್ತುತ ಎಲ್ಲಾ ಭಾಷಿಗರು ಇಲ್ಲಿ ನೆಲೆಸಿದ್ದು, ವಿಶೇಷವೆಂದರೆ ತುಳು-ಕನ್ನಡಿಗ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿರುವುದು ಮತ್ತು ಎಲ್ಲಾ ಭಾಷಿಗರ ಸಮಸ್ಯೆಗಳಿಗೆ ತತ್ಕ್ಷಣ ಸ್ಪಂದಿಸುವ ಮನೋಭಾವ ಗೋಪಾಲ್ ಶೆಟ್ಟಿ ಅವರಿಗೆ ವರದಾನವಾಗಲಿದೆ ಎಂದರು.
2014ರಲ್ಲಿ ಭರ್ಜರಿ ಜಯಭೇರಿ
2014ರಲ್ಲಿ ಬಿಜೆಪಿಯು ರಾಮ್ ನಾಯ್ಕ ಅವರ ಬದಲಾಗಿ ಗೋಪಾಲ ಶೆಟ್ಟಿ ಅವರನ್ನೇ ಅಭ್ಯರ್ಥಿಯಾಗಿ ಕಣಕ್ಕಿಳಿಸಿದ್ದು, 6,64,004 ಮತಗಳನ್ನು ಪಡೆದ ಗೋಪಾಲ ಶೆಟ್ಟಿ ಎದುರಾಳಿ ಕಾಂಗ್ರೆಸ್ನ ಸಂಜಯ್ ನಿರುಪಮ್ ಅವರಗಿಂತ 4,46,562 ಹೆಚ್ಚುವರಿ ಮತಗಳೊಂದಿಗೆ ಭರ್ಜರಿ ಜಯಭೇರಿ ಪಡೆದು ರಾಷ್ಟ್ರದ ಜನತೆ ಈ ಕ್ಷೇತ್ರದತ್ತ ಚಿತ್ತಹರಿಸುವಂತೆ ಮಾಡಿದ್ದರು. ಮಾತ್ರವಲ್ಲದೆ ಅತ್ಯಧಿಕ ಮತಗಳನ್ನು ಪಡೆದು ರಾಷ್ಟ್ರದಲ್ಲೇ ಐದನೇಸ್ಥಾನ ಮತ್ತು ಮಹಾರಾಷ್ಟ್ರ ರಾಜ್ಯದಲ್ಲೇ ಪ್ರಥಮ ಸ್ಥಾ§ನ ಪಡೆದ ಕೀರ್ತಿಗೆ ಪಾತ್ರರಾಗಿದ್ದರು.