Advertisement

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

01:15 AM Apr 27, 2024 | Team Udayavani |

ಗಾಂಧಿನಗರ: ನಾಮಪತ್ರ ತಿರಸ್ಕೃತ ಗೊಂಡ ಕಾರಣದಿಂದ ದೇಶಾದ್ಯಂತ ಸುದ್ದಿಯಾಗಿದ್ದ ಸೂರತ್‌ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ನೀಲೇಶ್‌ ಕುಂಭಾನಿ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ. ಕುಂಭಾನಿ ಅವರ ನಿರ್ಲಕ್ಷ್ಯದಿಂದಲೋ ಅಥವಾ ಅವರು ಬಿಜೆಪಿ ಜತೆ ಕೈಜೋಡಿಸಿರುವ ಕಾರಣದಿಂದಲೋ ನಾಮಪತ್ರ ತಿರಸ್ಕೃತವಾಗಿದೆ ಎಂಬ ತೀರ್ಮಾನಕ್ಕೆ ಬರಲಾಗಿದೆ.

Advertisement

ಪ್ರಕರಣದ ಬಗ್ಗೆ ವಿವರಣೆ ನೀಡುವಂತೆ ಕಾಲಾವಕಾಶ ನೀಡಿದ್ದರೂ, ಕುಂಭಾನಿ ನಾಪತ್ತೆಯಾಗಿ ದ್ದಾರೆ. ಬಿಜೆಪಿಯವರು ಉಳಿದ ಅಭ್ಯರ್ಥಿಗಳ ನಾಮಪತ್ರವನ್ನೂ ಹಿಂದೆ ಗೆಸಿದ್ದಾರೆ. ಇದು ಕ್ಷೇತ್ರದ ಜನರನ್ನು ಮತದಾನದ ಅವಕಾಶದಿಂದ ವಂಚಿಸಿ ದ್ದು, ಕುಂಭಾನಿ ಅವರನ್ನು ಪಕ್ಷದಿಂದ 6 ವರ್ಷ ಕಾಲ ಹೊರಹಾಕಲಾಗಿದೆ ಎಂದು ಕಾಂಗ್ರೆಸ್‌ ಹೇಳಿದೆ. ಈ ಕ್ಷೇತ್ರದಿಂದ ಬಿಜೆಪಿಯ ಮುಕೇಶ್‌ ದಲಾಲ್‌ ಅವಿರೋಧ ಆಯ್ಕೆಯಾಗಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next