Advertisement

ಬಿ.ವಿ.ನಾಯಕ ವಿರುದ್ಧ ಬಿಜೆಪಿ ದೂರು

10:25 PM Apr 07, 2019 | Team Udayavani |

ರಾಯಚೂರು: ಚುನಾವಣಾ ಪ್ರಚಾರದ ವೇಳೆ ಬಿಜೆಪಿಯನ್ನು ಟೀಕಿಸುವ ಭರದಲ್ಲಿ ಸೇನೆಯ ಅವಹೇಳನ ಮಾಡಿದ್ದಾರೆ ಎಂದು ರಾಯಚೂರು ಲೋಕಸಭೆ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಬಿ.ವಿ.ನಾಯಕ ವಿರುದ್ಧ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ಬಿಜೆಪಿ ರಾಜ್ಯ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ.

Advertisement

ಬಿಜೆಪಿ ರಾಜ್ಯ ಚುನಾವಣಾ ಸಮಿತಿಯ ಕಾನೂನು ಪ್ರಮುಖ ಎಂ.ವಿನೋದ ಕುಮಾರ ಅವರು ಶನಿವಾರ ಬೆಂಗಳೂರಿನಲ್ಲಿ ಆಯೋಗದ ಮುಖ್ಯಾಧಿಕಾರಿಗೆ ಲಿಖೀತ ದೂರು ನೀಡಿದ್ದಾರೆ.

ಖಾಸಗಿ ಸುದ್ದಿವಾಹಿನಿಗೆ ನೀಡಿದ ಹೇಳಿಕೆಯಲ್ಲಿ ನಾಯಕ ಅವರು, ಪ್ರಧಾನಿ ಮೋದಿ ರಕ್ಷಣಾ ಪಡೆಯನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ. ಪಾಕಿಸ್ತಾನದಂತಹ ಚಿಕ್ಕ ರಾಷ್ಟ್ರದ ಮೇಲೆ ದಾಳಿ ಮಾಡಿದ್ದಾರೆ. ಗುಬ್ಬಿ ಮೇಲೆ ಬ್ರಹ್ಮಾಸ್ತ್ರ ಪ್ರಯೋಗಿಸಿದ್ದಾರೆ ಎಂಬಂತಹ ಹೇಳಿಕೆ ನೀಡಿದ್ದರು ಎನ್ನಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next