Advertisement

ಸಚಿವ ಜಮೀರ್‌ ವಿರುದ್ಧ ಬಿಜೆಪಿ ದೂರು

10:32 PM Apr 20, 2019 | Lakshmi GovindaRaju |

ಬೆಂಗಳೂರು: ಪ್ರಧಾನಿ ಮೋದಿ ಹಾಗೂ ಅವರ ಪತ್ನಿ ಕುರಿತು ಸಚಿವ ಜಮೀರ್‌ ಅಹ್ಮದ್‌ ಖಾನ್‌ ನೀಡಿರುವ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿರುವ ರಾಜ್ಯ ಬಿಜೆಪಿ, ಚುನಾವಣಾ ಆಯೋಗಕ್ಕೆ ಶನಿವಾರ ದೂರು ನೀಡಿದೆ.

Advertisement

ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿರುವ ರಾಜ್ಯ ಬಿಜೆಪಿ ಚುನಾವಣಾ ಆಯೋಗ ಸಮಿತಿ ಸಂಚಾಲಕ ದತ್ತಗುರು ಹೆಗ್ಡೆ ಅವರು, ಪ್ರಧಾನಿ ವಿರುದ್ಧ ಮಾನಹಾನಿಕರ ಹಾಗೂ ಅನೈತಿಕ ಮಾತುಗಳನ್ನು ಸಚಿವರು ಆಡಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಹಾಗೂ ಪ್ರಚಾರ ಕೈಗೊಳ್ಳದಂತೆ ನಿರ್ಬಂಧಿಸಬೇಕೆಂದು ಆಗ್ರಹಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next