Advertisement

Mallikarjun Kharge ವಿರುದ್ಧವೂ ಚುನಾವಣ ಆಯೋಗಕ್ಕೆ ಬಿಜೆಪಿ ದೂರು

11:22 PM Apr 03, 2024 | Team Udayavani |

ಬೆಂಗಳೂರು: ಬಿಜೆಪಿ ಮತ್ತು ಆರ್‌ಎಸ್‌ಎಸ್‌ ವಿಷವಿದ್ದಂತೆ. ಅದರ ರುಚಿ ನೋಡಬೇಡಿ ಎಂದು ಹೇಳಿಕೆ ನೀಡಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಚುನಾವಣ ಆಯೋಗಕ್ಕೆ ಬಿಜೆಪಿ ನಿಯೋಗ ದೂರು ನೀಡಿದೆ.

Advertisement

ಖರ್ಗೆಯವರು ತಮ್ಮ ಹೇಳಿಕೆ ಮೂಲಕ ಮತದಾರರನ್ನು ನಮ್ಮ ಪಕ್ಷದ ವಿರುದ್ಧ ಎತ್ತಿ ಕಟ್ಟುವ ಕೆಲಸ ಮಾಡಿದ್ದಾರೆ ಎಂದು ಆಕ್ಷೇಪಿಸಲಾಗಿದೆ. ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಅಲ್ಲದೆ, ಚುನಾವಣ ಪ್ರಚಾರದಿಂದ ಕೂಡಲೇ ನಿರ್ಬಂ ಧಿಸಬೇಕು ಎಂದು ಆಗ್ರಹಿಸಲಾಗಿದೆ.

ಪ್ರಧಾನಿಯವರ ಫೋಟೊ ಬಳಸಿಕೊಂಡು ಸುಳ್ಳು ಆರೋಪ ಮಾಡುತ್ತಿರುವ ಯುವ ಕಾಂಗ್ರೆಸ್‌ನ ಮೀಡಿಯ ಪ್ಯಾನೆಲಿಸ್ಟ್ ಅಕ್ಷತಾ ರವಿಕುಮಾರ್‌ ಅವರ ಎಕ್ಸ್ (ಟ್ವಿಟ್ಟರ್‌) ಖಾತೆಯನ್ನು ಕೂಡಲೇ ನಿರ್ಬಂಧಿ ಸುವಂತೆ ಇನ್ನೊಂದು ಮನವಿಯಲ್ಲಿ ಆಗ್ರಹಿಸಿದೆ. ವಿಧಾನಪರಿಷತ್‌ ಸದಸ್ಯ ಛಲವಾದಿ ನಾರಾಯಣಸ್ವಾಮಿ, ರಾಜ್ಯ ವಕ್ತಾರ ಎಂ.ಜಿ.ಮಹೇಶ್‌ ಸೇರಿದಂತೆ ಇನ್ನಿತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next