Advertisement

ಗೋಡ್ಸೆ ದೇಶಭಕ್ತ ಹೇಳಿಕೆ; ರಕ್ಷಣಾ ಸಲಹಾ ಸಮಿತಿಯಿಂದ ಸಂಸದೆ ಪ್ರಜ್ಞಾ ಠಾಕೂರ್ ಗೆ ಕೊಕ್

09:33 AM Nov 29, 2019 | Team Udayavani |

ನವದೆಹಲಿ: ಲೋಕಸಭೆಯ ಚರ್ಚೆಯ ವೇಳೆ ಮಹಾತ್ಮ ಗಾಂಧಿ ಹಂತಕ ನಾಥೂರಾಂ ಗೋಡ್ಸೆಯನ್ನು ದೇಶಭಕ್ತ ಎಂದು ಕರೆದಿದ್ದ ಬಿಜೆಪಿ ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ವಿರುದ್ಧ ಬಿಜೆಪಿ ಅಸಮಾಧಾನ ವ್ಯಕ್ತಪಡಿಸಿದೆ. ಅಲ್ಲದೇ ಸಂಸದೀಯ ಪಕ್ಷದ ಸಭೆಗೆ ಹಾಜರಾಗುವುದಕ್ಕೆ ನಿರ್ಬಂಧ ವಿಧಿಸಿ, ಸಂಸದೀಯ ರಕ್ಷಣಾ ಸಲಹಾ ಸಮಿತಿಯಿಂದ ಕೈಬಿಟ್ಟಿರುವುದಾಗಿ ಬಿಜೆಪಿ ತಿಳಿಸಿದೆ.

Advertisement

ಬುಧವಾರ ಲೋಕಸಭೆಯಲ್ಲಿ ಸಾಧ್ವಿ ಪ್ರಜ್ಞಾ ಸಿಂಗ್ ನೀಡಿರುವ ಹೇಳಿಕೆಯನ್ನು ನಾವು ಖಂಡಿಸುತ್ತವೆ. ಅಲ್ಲದೇ ಸಿಂಗ್ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವುದಾಗಿ ಬಿಜೆಪಿ ಕಾರ್ಯಾಧ್ಯಕ್ಷ ಜೆಪಿ ನಡ್ಡಾ ಗುರುವಾರ ತಿಳಿಸಿದ್ದಾರೆ. ಇತ್ತೀಚೆಗಷ್ಟೇ ರಕ್ಷಣಾ ಸಲಹಾ ಸಮಿತಿಗೆ ಆಯ್ಕೆಯಾಗಿದ್ದ ಪ್ರಜ್ಞಾ ಠಾಕೂರ್ ಅವರನ್ನು ಆ ಸ್ಥಾನದಿಂದ ವಜಾಗೊಳಿಸಲಾಗಿದೆ ಎಂದು ಹೇಳಿದರು.

ನಿನ್ನೆ ಲೋಕಸಭೆಯಲ್ಲಿ ಎಸ್ ಪಿಜಿ ತಿದ್ದುಪಡಿ ವಿಧೇಯಕದ ಚರ್ಚೆ ವೇಳೆ ಡಿಎಂಕೆ ಸದಸ್ಯ ಎ.ರಾಜಾ ಅವರು ಗೋಡ್ಸೆ ಕುರಿತು ಪ್ರಸ್ತಾಪಿಸಿದಾಗ ಅವರನ್ನು ತಡೆದ ಪ್ರಜ್ಞಾ, ನೀವು ದೇಶಭಕ್ತನೊಬ್ಬನ ಉದಾಹರಣೆ ನೀಡಬೇಡಿ ಎಂದಿದ್ದರು. ಇದಕ್ಕೆ ಪ್ರತಿಪಕ್ಷಗಳ ಸದಸ್ಯರು ತೀವ್ರ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟಿಸಿದ್ದರು. ಸ್ಪೀಕರ್ ಬಿರ್ಲಾ ಅವರು ಪ್ರಜ್ಞಾ ಹೇಳಿಕೆಯನ್ನು ಕಡತದಿಂದ ಅಳಿಸುವಂತೆ ಸೂಚಿಸಿ ವಿವಾದಕ್ಕೆ ತೆರೆ ಎಳೆದಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next