Advertisement
ಭಾನುವಾರ ರಾತ್ರಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಯಾಗುತ್ತಿದ್ದಂತೆಯೇ ತರೀಕೆರೆ ಹಾಗೂ ಚಿಕ್ಕಮಗಳೂರಿನಲ್ಲಿ ಅಸಮಾಧಾನ ಸ್ಫೋಟಗೊಂಡಿತ್ತು. ನಗರದಲ್ಲಿ ಗಾಯತ್ರಿ ಶಾಂತೇಗೌಡರ ಬೆಂಬಲಿಗರು ಟೈರ್ ಗೆ ಬೆಂಕಿ ಹಾಕಿ ಪ್ರತಿಭಟನೆ ನಡೆಸಿದ್ದರು. ತರೀಕೆರೆಯಲ್ಲಿ ಶಾಸಕ ಶ್ರೀನಿವಾಸ್ ಅವರ ಮನೆಯಲ್ಲೇ ಸಭೆ ನಡೆಸಿದ ಬೆಂಬಲಿಗರು ಮುಖ್ಯಮಂತ್ರಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.
Related Articles
ಪರಿಸ್ಥಿತಿ ಕೈ ಮೀರುತ್ತಿದ್ದಂತೆ ಪೊಲೀಸರು ಮಧ್ಯ ಪ್ರವೇಶಿಸಿ ಕಾರ್ಯಕರ್ತರನ್ನು ಚುದುರಿಸಿ ವಿಜಯಕುಮಾರ್ ಅವರನ್ನು
ಸುರಕ್ಷಿತವಾಗಿ ಕಚೇರಿಯಿಂದ ಹೊರಗೆ ಕರೆದುಕೊಂಡು ಹೋದರು. ಜಿಪಂ ಸದಸ್ಯೆ ಪ್ರೇಮಾ ಮಂಜುನಾಥ್, ನಗರಸಭಾ ಸದಸ್ಯ ಎಚ್.ಎಸ್.ಪುಟ್ಟಸ್ವಾಮಿ, ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗದ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಇತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಕಡೂರಲ್ಲೂ ಪ್ರತಿಭಟನೆ: ಜಿಲ್ಲೆಯ ಇನ್ನೊಂದು ಕ್ಷೇತ್ರ ಕಡೂರಲ್ಲಿಯೂ ಟಿಕೆಟ್ ದೊರೆಯದ ಹಿನ್ನೆಲೆಯಲ್ಲಿ ಅಸಮಾಧಾನ ವ್ಯಕ್ತವಾಗಿದೆ. ಜಿಲ್ಲಾ ಪಂಚಾಯತ್ ಸದಸ್ಯ ಶರತ್ ಕೃಷ್ಣಮೂರ್ತಿ ಹಾಗೂ ಮುಖಂಡ ರಂಗನಾಥ್ ನೇತೃತ್ವದಲ್ಲಿ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಪಕ್ಷದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.
Advertisement
ಟಿಕೆಟ್ ಆಕಾಂಕ್ಷಿಯಾಗಿದ್ದ ಕೆ.ಎಂ. ಕೆಂಪರಾಜು ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಭೇಟಿಗೆ ಮೈಸೂರಿಗೆ ತೆರಳಿದ್ದು, ಅವರು ವಾಪಸ್ಸಾದ ನಂತರ ಮುಂದಿನ ನಡೆಯ ಬಗ್ಗೆ ತೀರ್ಮಾನಿಸಲಾಗುವುದು ಎಂದು ಪ್ರತಿಭಟನಾಕಾರರು ತಿಳಿಸಿದ್ದಾರೆ.
ಬಂಡಾಯವಿಲ್ಲ : ಇದೇ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗಾಯತ್ರಿ ಶಾಂತೇಗೌಡ, ನಾನು ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ಆಕಾಂಕ್ಷಿಯಾಗಿದ್ದೆ. ಕಳೆದ ಬಾರಿ ತಮ್ಮ ಪತಿಗೆ ಪಕ್ಷ ಟಿಕೆಟ್ ನೀಡಿತ್ತು. ವಿಧಾನಪರಿಷತ್ ಸದಸ್ಯೆಯೂ ಕೂಡ ಆಗಿದ್ದೆ. ಈ ಬಾರಿ ಪಕ್ಷ ಟಿಕೆಟ್ ನೀಡದೆ ಇರುವುದು ಕಾರ್ಯಕರ್ತರಿಗೆ ನೋವಾಗಿದೆ ಎಂದರು.
ಪಕ್ಷದ ಬಗ್ಗೆ ನನಗೆ ಯಾವುದೇ ಅಸಮಾಧಾನ ಇಲ್ಲ. ಸಿದ್ದರಾಮಯ್ಯ ನಮ್ಮ ನಾಯಕರು, ಅವರು ನಮ್ಮ ಮಾರ್ಗದರ್ಶಕರು. ಅವರ ಮೇಲೆ ನನಗೆ ಅಪಾರ ಗೌರವವಿದೆ. ಜಿಲ್ಲೆಯ ಅಭಿವೃದ್ಧಿಗೆ ಸಂಬಂಧಿಸಿದಂತೆ ಉತ್ತಮವಾಗಿ ಸಹಕರಿಸಿದ್ದಾರೆ ಎಂದು ಹೇಳಿದರು.
ನಾನು ಕಾಂಗ್ರೆಸ್ ಪಕ್ಷವನ್ನು ಯಾವುದೇ ಕಾರಣಕ್ಕೂ ತೊರೆಯುವುದಿಲ್ಲ. ಇದು, ನಾನು ಬೆಳೆಸಿದ ಪಕ್ಷ. ಕಾರ್ಯಕರ್ತರಿಗೆ ನೋವಾಗಿದೆ. ಅದುದರಿಂದ ಪ್ರತಿಭಟನೆ ಮಾಡುತ್ತಿದ್ದಾರೆ. ಕಾರ್ಯಕರ್ತರ ಮನವೊಲಿಸಲಾಗುವುದು. ಪಕ್ಷಕ್ಕಾಗಿ ಮುಂದೆಯೂ ದುಡಿಯುತ್ತೇನೆ ಎ.ವಿ. ಗಾಯತ್ರಿ ಶಾಂತೇಗೌಡ, ವಿ.ಪ. ಮಾಜಿ ಸದಸ್ಯ