Advertisement

ನಾಳೆ ಬಿಜೆಪಿ ಕೋರ್‌ ಕಮಿಟಿ ಸಭೆ

11:16 PM Oct 01, 2021 | Team Udayavani |

ಬೆಂಗಳೂರು: ಹಾನಗಲ್‌ ಹಾಗೂ ಸಿಂದಗಿ ಉಪ ಚುನಾವಣೆ ಸಿದ್ಧತೆ ಹಾಗೂ ಪಕ್ಷದ ಅಭ್ಯರ್ಥಿಗಳ ಆಯ್ಕೆ ಕುರಿತಂತೆ ಚರ್ಚಿಸಲು ರವಿವಾರ ಬಿಜೆಪಿ ಕೋರ್‌ ಕಮಿಟಿ ಸಭೆ ನಡೆಯಲಿದ್ದು, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್‌ ಸಿಂಗ್‌ ಆಗಮಿಸಲಿದ್ದಾರೆ.

Advertisement

ಮಧ್ಯಾಹ್ನ ನಡೆಯುವ ಸಭೆಯಲ್ಲಿ 2 ಕ್ಷೇತ್ರಗಳ ಸಂಭಾವ್ಯ ಅಭ್ಯರ್ಥಿಗಳ ಕುರಿತು ಚರ್ಚಿಸಿ, ಸಂಭಾವ್ಯ ಹೆಸರುಗಳನ್ನು ಹೈಕಮಾಂಡ್‌ಗೆ ರವಾನಿಸಲಾಗುವುದು. ಚುನಾವಣ ಉಸ್ತುವಾರಿಗಳ ನೇಮಕ ಸಹಿತ ಹಲವು ವಿಷಯಗಳು ಚರ್ಚೆಯಾಗಲಿವೆ ಎಂದು ತಿಳಿದು ಬಂದಿದೆ.

ಸ್ಪರ್ಧೆ ವಿಷಯ ವರಿಷ್ಠರ ನಿರ್ಧಾರ: ವಿಜಯೇಂದ್ರ
ಉಪ ಚುನಾವಣೆಯಲ್ಲಿ ಸ್ಪರ್ಧಿಸುವ ವಿಚಾರದಲ್ಲಿ ಪಕ್ಷದ ವರಿಷ್ಠರ ಆದೇಶಕ್ಕೆ ಬದ್ಧನಾಗಿರುವುದಾಗಿ ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.

ಇದನ್ನೂ ಓದಿ:ಕೊಲೊಂಬೊ ಬಂದರಿನಲ್ಲಿ ಅದಾನಿ ಗ್ರೂಪ್‌ನ 5 ಸಾವಿರ ಕೋಟಿ ರೂ. ಹೂಡಿಕೆ

ವಿಕಾಸಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಉಪ ಚುನಾವಣೆಯಲ್ಲಿ ಯಾವ ಕ್ಷೇತ್ರದ ಉಸ್ತುವಾರಿ ನೀಡಿದರೂ ನಿಭಾಯಿಸುತ್ತೇನೆ. ಉಪ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಕೋರ್‌ ಕಮಿಟಿ ಸಭೆಯಲ್ಲಿ ತೀರ್ಮಾನ ಆಗಲಿದೆ ಎಂದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next