Advertisement

ಬಿಜೆಪಿ ಗಡುವು: ಉತ್ಸಾಹದಿಂದ ಕಾಯುತ್ತಿದ್ದೇನೆ

06:55 AM Nov 08, 2018 | Team Udayavani |

ಹಾಸನ: ರಾಜ್ಯದಲ್ಲಿರುವ ಮೈತ್ರಿ ಸರ್ಕಾರವನ್ನು ಉರುಳಿಸುವ ಬಿಜೆಪಿಯವರ ಹಲವು ಗಡುವುಗಳನ್ನು ನೋಡಿದ್ದೇನೆ. ಇನ್ನು ಉಪ ಚುನಾವಣೆ ನಂತರ, ದೀಪಾವಳಿ ನಂತರದ ಗಡುವನ್ನೂ ಉತ್ಸಾಹದಿಂದ ಕಾಯುತ್ತಿದ್ದೇನೆ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್‌ ವ್ಯಂಗ್ಯವಾಡಿದರು. 

Advertisement

ಸುದ್ದಿಗಾರರೊಂದಿಗೆ ಮಾತನಾಡಿ, ಉಪ ಚುನಾವಣೆಯಲ್ಲಿ ಜನರು ಸಮ್ಮಿಶ್ರ ಸರ್ಕಾರದ ಮೇಲೆ ವಿಶ್ವಾಸವಿಟ್ಟು ಮೈತ್ರಿ ಅಭ್ಯರ್ಥಿಗಳಿಗೆ ವಿಜಯದ ಮಾಲೆ ತೊಡಿಸಿದ್ದಾರೆ. ಜನರ ವಿಶ್ವಾಸವನ್ನು ಉಳಿಸಿಕೊಳ್ಳುತ್ತೇವೆ ಎಂದರು. ಸ್ಪರ್ಧಿಸಿದ ಎಲ್ಲ ಕ್ಷೇತ್ರಗಳಲ್ಲೂ ಎಲ್ಲ ಪಕ್ಷವೂ ಗೆಲ್ಲಲು ಸಾಧ್ಯವಿಲ್ಲ. ಅಂತೆಯೇ ಶಿವಮೊಗ್ಗದಲ್ಲಿ ಮೈತ್ರಿ ಅಭ್ಯರ್ಥಿ ಸೋತಿದ್ದಾರೆ. ಆದರೆ  ಸೋಲಿನ ಅಂತರ ಮೈತ್ರಿ ಕೂಟಕ್ಕೆ ಆತಂಕಕಾರಿಯೇನೂ ಅಲ್ಲ. ನೈತಿಕ ಗೆಲುವು ಸಿಕ್ಕಿದೆ ಎಂಬುದು ನಮ್ಮ ಭಾವನೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next