Advertisement

ದಂಗೆ ಹೇಳಿಕೆ:ಸಿಎಂ ವಿರುದ್ಧ ಡಿಜಿಪಿಗೆ ದೂರು ನೀಡಿದ ಬಿಜೆಪಿ ನಿಯೋಗ  

11:27 AM Sep 21, 2018 | Team Udayavani |

ಬೆಂಗಳೂರು : ರಾಜ್ಯದ ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ ನಡೆಸಿ ರಾಜ್ಯದಲ್ಲಿ ಅಭಿವೃದ್ಧಿಗೆ ಅಡಚಣೆ ಮಾಡುತ್ತಿರುವ ಬಿಜೆಪಿ ನಾಯಕರ ವಿರುದ್ಧ ರಾಜ್ಯದ ಜನರು ದಂಗೆ ಏಳಬೇಕು” ಎಂದು ಹೇಳಿಕೆ ನೀಡಿದ್ದ  ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ವಿರುದ್ಧ ಬಿಜೆಪಿ ನಿಯೋಗ ಶುಕ್ರವಾರ  ರಾಜ್ಯ ಪೊಲೀಸ್‌ ಮಹಾನಿರ್ದೇಶಕಿ ನೀಲಮಣಿ ರಾಜು ಅವರಿಗೆ ದೂರು ನೀಡಿ ಕ್ರಮ ಕೈಗೊಳ್ಳಲು ಆಗ್ರಹಿಸಿದೆ. 

Advertisement

ಸಂಸದೆ ಶೋಭಾ ಕರಂದ್ಲಾಜೆ ನಿಯೋಗ ಡಿಜಿಪಿ ಕಚೇರಿಗೆ ಆಗಮಿಸಿ ದೂರು ನೀಡಿದೆ. 

ಗೋವಿಂದ ಕಾರಜೋಳ, ಸಿ.ಎಂ.ಉದಾಸಿ, ತೇಜಸ್ವಿನಿ ಗೌಡ , ಆಯನೂರು ಮಂಜುನಾಥ್‌, ಹರತಾಳು ಹಾಲಪ್ಪ ಮೊದಲಾದವರು ನಿಯೋಗದಲ್ಲಿದ್ದರು. 

Advertisement

Udayavani is now on Telegram. Click here to join our channel and stay updated with the latest news.

Next