Advertisement

Chennai: ರಾಜ್ಯಪಾಲರ ಭೇಟಿಯಾದ ಬಿಜೆಪಿ ನಿಯೋಗ

10:49 PM Oct 28, 2023 | Team Udayavani |

ಚೆನ್ನೈ: ತಮಿಳುನಾಡು ಪೊಲೀಸರಿಂದ ಬಿಜೆಪಿ ಕಾರ್ಯಕರ್ತರ ಮೇಲೆ ದೌರ್ಜನ್ಯ ಮತ್ತು ಕಿರುಕುಳ ವಿರೋಧಿಸಿ ಹಾಗೂ ಇದನ್ನು ತಡೆಯಲು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ತಮಿಳುನಾಡು ರಾಜ್ಯಪಾಲ ಆರ್‌.ಎನ್‌.ರವಿ ಅವರಿಗೆ ಶನಿವಾರ ಕರ್ನಾಟಕ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ನೇತೃತ್ವದ ಬಿಜೆಪಿ ನಿಯೋಗ ಮನವಿ ಪತ್ರ ಸಲ್ಲಿಸಿತು. ಬಿಜೆಪಿ ನಿಯೋಗದಲ್ಲಿ ಬೆಂಗಳೂರು ಸೆಂಟ್ರಲ್‌ ಸಂಸದ ಪಿ.ಸಿ.ಮೋಹನ್‌, ಸಂಸದ ಸತ್ಯಪಾಲ್‌ ಸಿಂಗ್‌ ಮತ್ತು ಆಂಧ್ರ ಪ್ರದೇಶ ಬಿಜೆಪಿ ಅಧ್ಯಕ್ಷೆ ಡಿ.ಪುರಂದೇಶ್ವರಿ ಇದ್ದರು.

Advertisement

“ತಮಿಳುನಾಡಿನಲ್ಲಿ ಡಿಎಂಕೆ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಬಿಜೆಪಿ ಕಾರ್ಯಕರ್ತರ ವಿರುದ್ಧ 409 ಪ್ರಕರಣಗಳನ್ನು ದಾಖಲಿಸಲಾಗಿದೆ. ಸಂವಿಧಾನವನ್ನು ಗಾಳಿಗೆ ತೂರಿ ಸಿಎಂ ಸ್ಟಾಲಿನ್‌ ಜನ ವಿರೋಧಿ ಆಡಳಿತ ನಡೆಸುತ್ತಿದ್ದಾರೆ’ ಎಂದು ಡಿ.ವಿ.ಸದಾನಂದಗೌಡ ಕಿಡಿಕಾರಿದರು. “ಅಧಿಕಾರವಿದೆ ಎಂದು ಪೊಲೀಸರನ್ನು ಬಳಸಿಕೊಂಡು, ಬಿಜೆಪಿ ಕಾರ್ಯಕರ್ತರ ಮೇಲೆ ದೌರ್ಜನ್ಯ ಎಸಗಲಾಗುತ್ತಿದೆ’ ಎಂದು ಆರೋಪಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next