Advertisement

BJP: ವರದಿ ಬಹಿರಂಗ ಚರ್ಚೆಗೆ ವಿಶೇಷ ಅಧಿವೇಶನಕ್ಕೆ ಬಿಜೆಪಿ ಆಗ್ರಹ

10:13 PM Feb 29, 2024 | Team Udayavani |

ಬೆಂಗಳೂರು: ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಜಯಪ್ರಕಾಶ್‌ ಹೆಗ್ಡೆ ಸಲ್ಲಿಸಿರುವ ವರದಿಯನ್ನು ಬಹಿರಂಗ ಚರ್ಚೆಗಿಡಬೇಕೆಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದರೆ, ಈ ಬಗ್ಗೆ ವಿಶೇಷ ಅಧಿವೇಶನ ಕರೆಯಲು ಬಿಜೆಪಿಯ ವಿ.ಸುನಿಲ್‌ ಕುಮಾರ್‌ ಆಗ್ರಹಿಸಿದ್ದಾರೆ.

Advertisement

ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿ, ಈ ಹಿಂದೆ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕಾಂತರಾಜು ಅವರಿದ್ದಾಗ ಜಾತಿಗಣತಿಗೆ ಆದೇಶಿಸಿರಲಿಲ್ಲ. ಈಗ ಸರಕಾರ ಸ್ವೀಕರಿಸಿರುವುದು ಕಾಂತರಾಜ ವರದಿಯನ್ನೋ ಅಥವಾ ಜಯಪ್ರಕಾಶ್‌ ಹೆಗ್ಡೆ ವರದಿಯನ್ನೋ ಎಂಬುದನ್ನು ಮೊದಲು ಸ್ಪಷ್ಟಪಡಿಸಬೇಕು ಎಂದಿದ್ದಾರೆ.

ಸುನೀಲ್‌ ಕುಮಾರ್‌ ಮಾತನಾಡಿ, ಹತ್ತು ವರ್ಷಗಳ ಸುದೀರ್ಘ‌ ವನವಾಸದ ಬಳಿಕ ಹಿಂದುಳಿದ ವರ್ಗಗಳ ಆಯೋಗದಿಂದ ಸಿಎಂ ಸಿದ್ದರಾಮಯ್ಯ ಅವರು ಸ್ವೀಕರಿಸಿರುವ ವರದಿಯ ಸ್ವರೂಪ ಏನೆಂಬುದು ಮೊದಲು ನಿರ್ಧಾರವಾಗಬೇಕಿದೆ. ಇದು ಜಾತಿಗಣತಿಯೋ ? ಶೈಕ್ಷಣಿಕ ಸಮೀಕ್ಷೆಯೋ ? ಅಥವಾ ಆರ್ಥಿಕ ಸಮೀಕ್ಷೆಯೋ  ಎಂಬುದನ್ನು ಸರಕಾರ ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next