Advertisement

Karnataka ಇಬ್ಬರು ಸಚಿವರನ್ನು ಕೈ ಬಿಡಲು ಬಿಜೆಪಿ ಆಗ್ರಹ

08:45 PM Sep 11, 2023 | Team Udayavani |

ಬೆಂಗಳೂರು: ದಲಿತ ವಿರೋಧಿ ನೀತಿ ಅನುಸರಿಸುತ್ತಿರುವ ರಾಜ್ಯದ ಇಬ್ಬರು ಸಚಿವರನ್ನು ತಕ್ಷಣ ಸಂಪುಟದಿಂದ ಕೈ ಬಿಡುವಂತೆ ಬಿಜೆಪಿ ಎಸ್‌ಸಿ ಮೋರ್ಚಾ ಅಧ್ಯಕ್ಷ ಛಲವಾದಿ ನಾರಾಯಣಸ್ವಾಮಿ ಒತ್ತಾಯಿಸಿದ್ದಾರೆ.

Advertisement

ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ಸಚಿವ ಡಿ.ಸುಧಾಕರ್‌ ವಿರುದ್ಧ ದಲಿತ ಜಾತಿ ನಿಂದನೆ ಪ್ರಕರಣ ದಾಖಲಾಗಿದೆ. ಅವರ ವಿರುದ್ಧ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಎಫ್ಐಆರ್‌ ದಾಖಲಾದ ತಕ್ಷಣ ಅವರನ್ನು ಬಂಧಿಸಬೇಕಿತ್ತು. ಆದರೆ ಯಾವುದೇ ಕಾನೂನು ಕ್ರಮ ಕೈಗೊಂಡಿಲ್ಲ. ಜಾತಿ ನಿಂದನೆ ಮಾಡಿದ ಚಿತ್ರನಟ ಉಪೇಂದ್ರ ವಿರುದ್ಧ ತೀಕ್ಷ್ಣ ಕ್ರಮ ಕೈಗೊಳ್ಳಲಾಗಿತ್ತು. ಆದರೆ ಸಚಿವ ಎಸ್‌.ಎಸ್‌.ಮಲ್ಲಿಕಾರ್ಜುನ್‌ ಅವರು ಹಳ್ಳಿಗಳನ್ನು ಹೊಲಗೇರಿ ಮಾಡಬೇಡಿ ಎಂದಿದ್ದರು. ಆ ವಿಡಿಯೋ ಓಡಾಡುತ್ತಿದ್ದರೂ ದೂರು ದಾಖಲಿಸಿ ಕ್ರಮ ಕೈಗೊಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ದಲಿತ ದೌರ್ಜನ್ಯ ಕಾಯಿದೆಯಡಿ ಕೇಸು ಬಂದಾಗ ತಕ್ಷಣ ಕ್ರಮಕ್ಕೆ ಸಿಎಂ ಸೂಚಿಸಿದ್ದಾರೆ. ಡಿಸಿಪಿ ಸಂಬರಗಿ ಎಂಬವರು ದಲಿತರ ನಿಂದನೆ ಮಾಡಿದರೂ ಇಲಾಖೆ ಮತ್ತು ಸರಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ನಾವು ದಲಿತರ ಹಕ್ಕು ರಕ್ಷಿಸುವುದಾಗಿ, ಅವರ ಪರ ಇರುವುದಾಗಿ ಸಿಎಂ ಹೇಳುತ್ತಾರೆ. ಇದೆಲ್ಲ ಗೋಸುಂಬೆ ರಾಜಕಾರಣ ಎಂದು ಕಿಡಿಕಾರಿದರು.

ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್‌ ನಾಯಕರು ಬಾಯಲ್ಲಿ ಹೇಳುವುದು ಒಂದು, ಮಾಡುವುದು ಇನ್ನೊಂದು ಎಂಬಂತಾಗಿದೆ. ಈ ಸರ್ಕಾರದ್ದು ಇಬ್ಬಗೆಯ ನೀತಿ. ಮುಖ್ಯಮಂತ್ರಿಗಳು ದಲಿತ ವಿರೋಧಿ ಎಂಬುದಕ್ಕೆ ಇವೇ ನಿದರ್ಶನ. ಸುಧಾಕರ್‌, ಮಲ್ಲಿಕಾರ್ಜುನ್‌ ಅವರನ್ನು ಮಂತ್ರಿಮಂಡಲದಿಂದ ಕಿತ್ತೆಸೆಯಬೇಕಿತ್ತು. ಈ ಇಬ್ಬರನ್ನು ಸಚಿವ ಸಂಪುಟದಿಂದ ಕೈಬಿಡದಿದ್ದರೆ ಇಡೀ ರಾಜ್ಯದಲ್ಲಿ ದಲಿತರು ಬೀದಿಗಿಳಿದು ಹೋರಾಟ ಮಾಡುತ್ತೇವೆ ಎಂದು ಎಚ್ಚರಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next