Advertisement

BJP ಜಾತಿ, ಧರ್ಮ ಮತ್ತು ಭಾಷೆಯ ಹೆಸರಿನಲ್ಲಿ ದೇಶವನ್ನು ವಿಭಜಿಸುತ್ತಿದೆ: ರಾಹುಲ್ ಗಾಂಧಿ

07:46 PM Jan 20, 2024 | Team Udayavani |

ಇಟಾನಗರ:ಕಾಂಗ್ರೆಸ್‌ನ ‘ಭಾರತ್ ಜೋಡೋ ನ್ಯಾಯ್ ಯಾತ್ರೆ’ ಶನಿವಾರ ಅರುಣಾಚಲ ಪ್ರದೇಶಕ್ಕೆ ಪ್ರವೇಶಿಸಿದ್ದು, ರಾಹುಲ್ ಗಾಂಧಿ ಬಿಜೆಪಿ ವಿರುದ್ಧ ನಿರಂತರ ವಾಗ್ದಾಳಿ ಮುಂದುವರಿಸಿದ್ದು “ಜಾತಿ, ಧರ್ಮ ಮತ್ತು ಧರ್ಮದ ಹೆಸರಿನಲ್ಲಿ ದೇಶವನ್ನು ವಿಭಜಿಸುತ್ತಿದೆ” ಎಂದು ಆರೋಪಿಸಿದ್ದಾರೆ.

Advertisement

ದೋಮುಖ್ ನಿವಾಸಿಗಳೊಂದಿಗೆ ಸಂವಾದ ನಡೆಸಿದ ರಾಹುಲ್, ”ಬಿಜೆಪಿ ಧರ್ಮ ಮತ್ತು ಭಾಷೆಯ ಹೆಸರಿನಲ್ಲಿ ಜಗಳವಾಡಲು ಜನರನ್ನು ಪ್ರಚೋದಿಸುತ್ತದೆ” ಎಂದು ಆರೋಪಿಸಿದರು.

“ಬಿಜೆಪಿಯು ಕೆಲವು ಉದ್ಯಮಿಗಳ ಹಿತಾಸಕ್ತಿಗಾಗಿ ಕೆಲಸ ಮಾಡುತ್ತದೆ, ಬಹಳಷ್ಟು ಕಷ್ಟದಲ್ಲಿರುವ ಜನರ ಹಿತಾಸಕ್ತಿಗಾಗಿ ಅಲ್ಲ. ಕಾಂಗ್ರೆಸ್ ಜನರನ್ನು ಒಗ್ಗೂಡಿಸಲು ಮತ್ತು ಅವರ ಒಳಿತಿಗಾಗಿ ಕೆಲಸ ಮಾಡುತ್ತದೆ.ನಾವು ಅರುಣಾಚಲ ಪ್ರದೇಶಕ್ಕೆ ರಾಜ್ಯ ಸ್ಥಾನಮಾನವನ್ನು ನೀಡಿದ್ದೇವೆ ಮತ್ತು ನಮ್ಮ ಪಕ್ಷವು ಬಡವರ ಸಮಸ್ಯೆಗಳನ್ನು ಆಲಿಸಲು, ಯುವಕರು, ಮಹಿಳೆಯರು ಮತ್ತು ಸಮಾಜದ ದುರ್ಬಲ ವರ್ಗಗಳ ಒಳಿತಿಗಾಗಿ ಕೆಲಸ ಮಾಡಲು ಯಾವಾಗಲೂ ಸಿದ್ಧವಾಗಿದೆ”ಎಂದರು.

ಜನವರಿ 14 ರಂದು ಮಣಿಪುರದಿಂದ ಆರಂಭಗೊಂಡ 6,713 ಕಿಮೀ ಉದ್ದದ ‘ಭಾರತ್ ಜೋಡೋ ನ್ಯಾಯ್ ಯಾತ್ರೆ’ ಮಾರ್ಚ್ 20 ರಂದು ಮುಂಬೈನಲ್ಲಿ ಮುಕ್ತಾಯಗೊಳ್ಳಲಿದೆ.

Advertisement

Udayavani is now on Telegram. Click here to join our channel and stay updated with the latest news.

Next