Advertisement
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಯವರು ಸರ್ಕಾರ ರಚನೆಯ ಹಗಲು ಗನಸು ಕಾಣುತ್ತಿದ್ದು ಅವರ ಪ್ರಯತ್ನಕ್ಕೆ ಮಾನ್ಯತೆ ಸಿಗುವುದಿಲ್ಲ ಎಂದು ಹೇಳಿದರು.
Related Articles
Advertisement
ಶಾಸಕರು ಸಹ ಮಾಧ್ಯಮಗಳಿಗೆ ಯಾವುದೇ ಹೇಳಿಕೆ ನೀಡಬಾರದು ಎಂದು ಸೂಚಿಸಲಾಗಿದೆ. ಪಕ್ಷದ ಶಿಸ್ತು ಉಲ್ಲಂ ಸಿದರೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.ಸಂಫುಟ ವಿಸ್ತರಣೆ ಅ.4 ರ ವಿಧಾನಪರಿಷತ್ ಚುನಾವಣೆ ನಂತರ ಆಗಲಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.ವಿಧಾನಪರಿಷತ್ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಹೈಕಮಾಂಡ್ ಜತೆ ಚರ್ಚಿಸಿದ್ದು ಶುಕ್ರವಾರ ಅಂತಿಮಗೊಳ್ಳಲಿದೆ ಎಂದರು.
ಕಾಂಗ್ರೆಸ್-ಜೆಡಿಎಸ್ ಶಾಸಕರು ರೆಸಾರ್ಟ್ಗೆ ಹೋಗ್ತಾರೆ, ಮಹಾರಾಷ್ಟ್ರ ಹೋಗ್ತಾರೆ ಎಂಬೆಲ್ಲಾ ಸುದ್ದಿ ಮಾಧ್ಯಮಗಳಲ್ಲಿ ಪ್ರಸಾರ ಮಾಡಲಾಗುತ್ತಿದೆ. ಮಾಧ್ಯಮಗಳಿಗೂ ದೊಡ್ಡ ಜವಾಬ್ದಾರಿ ಇದೆ.ಅನಾವಶ್ಯಕವಾಗಿ ಯಾವುದೇ ದಾಖಲೆ ಇಲ್ಲದೆ ಇಂಥದ್ದನ್ನು ಯಾಕೆ ಹಾಕ್ತಾರೆ? ಕೆಲ ಮಾಧ್ಯಮಗಳನ್ನು ಪ್ರಶ್ನೆ ಮಾಡಬೇಕಾಗುತ್ತದೆ.ರಾಜ್ಯದ ಆಡಳಿತ ಕುಸಿತಕ್ಕೆ ನೀವು ಭಾಗಿದಾರರ ಅಂತ ಪ್ರಶ್ನೆ ಮಾಡಬೇಕಾಗುತ್ತದೆ ಎಂದರು. ಇದಕ್ಕೆ ಗೋಷ್ಠಿಯಲ್ಲಿ ಹಾಜರಿದ್ದ ವರದಿಗಾರರು ಆಕ್ಷೇಪ ವ್ಯಕ್ತಪಡಿಸಿ ನಿಮ್ಮದೇ ಪಕ್ಷದ ಶಾಸಕರು-ನಾಯಕರು ಗೊಂದಲ ಸೃಷ್ಟಿಸುತ್ತಿದ್ದಾರೆ. ನೀವೇಕೆ ಮಾಧ್ಯಮಗಳ ಮೇಲೆ ಆರೋಪ ಮಾಡ್ತೀರಿ ಎಂದು ತರಾಟೆಗೆ ತೆಗೆದುಕೊಂಡರು.