Advertisement

BJP; ಲೋಕಸಭಾ ಚುನಾವಣೆಗೆ ಪ್ರಣಾಳಿಕೆ ಸಮಿತಿ ಪ್ರಕಟ: ರಾಜನಾಥ್ ಅಧ್ಯಕ್ಷ

04:33 PM Mar 30, 2024 | Team Udayavani |

ಹೊಸದಿಲ್ಲಿ: ಬಿಜೆಪಿ ಲೋಕಸಭಾ ಚುನಾವಣೆಗೆ ಪ್ರಣಾಳಿಕೆ ಸಮಿತಿಯನ್ನು ಪ್ರಕಟಿಸಿದ್ದು ರಕ್ಷಣ ಸಚಿವ ರಾಜನಾಥ್ ಸಿಂಗ್ ಅವರು ಅಧ್ಯಕ್ಷ ರಾಗಿದ್ದು, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಚಾಲಕಿಯಾಗಿದ್ದು, ಸಚಿವ ಪಿಯೂಷ್ ಗೋಯಲ್ ಅವರು ಸಹ ಸಂಚಾಲಕರಾಗಿದ್ದಾರೆ.

Advertisement

ಕರ್ನಾಟಕದಿಂದ ರಾಜ್ಯ ಸಭಾ ಸದಸ್ಯರಾಗಿರುವ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಸದಸ್ಯರಾಗಿ ಪ್ರತಿನಿಧಿಸುತ್ತಿದ್ದಾರೆ. ಅವರು ತಿರುವನಂತಪುರಂ ನಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ.

ಕೇಂದ್ರ ಸಚಿವರಾದ ಧರ್ಮೇಂದ್ರ ಪ್ರಧಾನ್, ಅಶ್ವಿನಿ ವೈಷ್ಣವ್, ಸ್ಮೃತಿ ಇರಾನಿ, ರಾಜೀವ್ ಚಂದ್ರಶೇಖರ್, ಕಿರಣ್ ರಿಜಿಜು ಮತ್ತು ಅರ್ಜುನ್ ಮುಂಡಾ ಸೇರಿದಂತೆ 27 ಸದಸ್ಯರ ಚುನಾವಣಾ ಪ್ರಣಾಳಿಕೆ ಸಮಿತಿ ಸದಸ್ಯರಾಗಿರೆ.

ಅರ್ಜುನ್ ರಾಮ್ ಮೇಘವಾಲ್, ಭೂಪೇಂದರ್ ಯಾದವ್, ವಿಷ್ಣು ದೇವ್ ಸಾಯಿ, ಭೂಪೇಂದರ್ ಪಟೇಲ್, ಶಿವರಾಜ್ ಸಿಂಗ್ ಚೌಹಾಣ್, ಮೋಹನ್ ಯಾದವ್, ವಸುಂಧರಾ ರಾಜೆ ಮತ್ತು ರವಿಶಂಕರ್ ಪ್ರಸಾದ್, ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮ ಸದಸ್ಯರಾಗಿರುವ ಪ್ರಮುಖ ಬಿಜೆಪಿ ನಾಯಕರಲ್ಲಿ ಸೇರಿದ್ದಾರೆ.

ವಿನೋದ್ ತಾವ್ಡೆ, ರಾಧಾ ಮೋಹನ್ ದಾಸ್ ಅಗರ್ವಾಲ್, ಮಂಜಿಂದರ್ ಸಿಂಗ್ ಸಿರ್ಸಾ, ಒ.ಪಿ. ಧನ್ಕರ್, ಅನಿಲ್ ಆಂಟನಿ, ತಾರಿಖ್ ಮನ್ಸೂರ್ ಸಮಿತಿಯ ಸದಸ್ಯರಾಗಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next