Advertisement

ಮಂಗಳೂರಿನಲ್ಲಿ ಬಿಜೆಪಿ ಕಾರ್ಯಕಾರಣಿ ಸಭೆ ಆರಂಭ: ಕಾರ್ಯಕ್ರಮ ಉದ್ಘಾಟಿಸಿದ ಸಿಎಂ ಬಿಎಸ್ ವೈ

12:04 PM Nov 05, 2020 | keerthan |

ಮಂಗಳೂರು: ಕಡಲ ನಗರಿ ಮಂಗಳೂರಿನಲ್ಲಿ ಇಂದು ಬಿಜೆಪಿ ಕಾರ್ಯಕಾರಣಿ ಸಭೆ ಆರಂಭವಾಗಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನವರು ಕಾರ್ಯಕಾರಣಿ ಸಭೆಯನ್ನು ಉದ್ಘಾಟಿಸಿದರು. ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅಧ್ಯಕ್ಷತೆ ವಹಿಸಿದ್ದಾರೆ.

Advertisement

ಬೆಳಿಗ್ಗೆ ವಾದ್ಯಘೋಷಗಳೊಂದಿಗೆ ಬಿಜೆಪಿ ನಾಯಕರನ್ನು ಸಮಾರಂಭ ನಡೆಯುವ ಟಿ.ವಿ ರಮಣ್ ಪೈ ಸಭಾಂಗಣಕ್ಕೆ ಬರಮಾಡಿಕೊಳ್ಳಲಾಯಿತು. ನಂತರ ಬಿ ಎಸ್.ಯಡಿಯೂರಪ್ಪನವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಕೇಂದ್ರ ಸಚಿವರಾದ ಡಿವಿ ಸದಾನಂದ ಗೌಡ, ಪ್ರಹ್ಲಾದ ಜೋಶಿ, ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್, ಸಚಿವ ಕೆ.ಎಸ್. ಈಶ್ವರಪ್ಪ, ಕಂದಾಯ ಸಚಿವ ಆರ್. ಅಶೋಕ್, ಪಕ್ಷದ ಮುಖಂಡ ಅರವಿಂದ ಲಿಂಬಾವಳಿ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಅವರು ವೇದಿಕೆಯಲ್ಲಿದ್ದರು. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸ್ವಾಗತಿಸಿದರು.

ಇದನ್ನೂ ಓದಿ:ಮಂಗಳೂರಿನಲ್ಲಿ ಇಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿ: ಕಾರ್ಯಕರ್ತರಲ್ಲಿ ತುಂಬಿದ ಉತ್ಸಾಹ

Advertisement

ವಾಹನ ದಟ್ಟಣೆಯಾಗದಂತೆ ಕ್ರಮ

ಬಂಟ್ಸ್ ಹಾಸ್ಟೆಲ್, ಪಿವಿಎಸ್ ನಿಂದ ನವಭಾರತ್ ಸರ್ಕಲ್ ಮೂಲಕ ಕ.ಎಸ್. ರಾವ್ ರಸ್ತೆಯಲ್ಲಿ ಸಂಚರಿಸುವ ವಾಹನಗಳನ್ನು ಕೈಬರ್ ಪಾಸ್ ರಸ್ತೆ ಮುಖಾಂತರ ಕೆ.ಎಸ್. ರಾವ್ ರಸ್ತೆ ಕಡೆಗೆ ಬಿಡಲಾಗುತ್ತಿದೆ. ವಾಹನ ದಟ್ಟಣೆಯಾಗದಂತೆ ತಡೆಯಲು ಪಿವಿಎಸ್ ಸರ್ಕಲ್ ನಿಂದ ನವಭಾರತ್ ಸರ್ಕಲ್ ವರೆಗೆ ಸಂಚಾರ ಸ್ಥಗಿತಗೊಳಿಸಲಾಗಿದೆ. ಪಿವಿಎಸ್ ಸರ್ಕಲ್ ನಿಂದ ಸಭಾಂಗಣ ಸುತ್ತಮುತ್ತಲಿನವರೆಗೆ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next