Advertisement

ಸಾರ್ವಭೌಮತ್ವ ವಿಚಾರ: ಸೋನಿಯಾ ಗಾಂಧಿ ವಿರುದ್ಧ ಬಿಜೆಪಿ ದೂರು

02:48 PM May 08, 2023 | Team Udayavani |

ಬೆಂಗಳೂರು : ಕರ್ನಾಟಕದ ಪ್ರತಿಷ್ಠೆ, ಸಾರ್ವಭೌಮತ್ವ ಅಥವಾ ಸಮಗ್ರತೆಗೆ ಧಕ್ಕೆ ತರಲು ಯಾರಿಗೂ ಅವಕಾಶ ನೀಡುವುದಿಲ್ಲ ಎಂಬ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ವಿರುದ್ಧ ಬಿಜೆಪಿ ಸೋಮವಾರ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದು, ಅವರ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ನೀಡುವಂತೆ ಮನವಿ ಮಾಡಿದೆ.

Advertisement

ಶನಿವಾರ ಹುಬ್ಬಳ್ಳಿಯಲ್ಲಿ ನಡೆದ ಪ್ರಚಾರ ಸಭೆಯಲ್ಲಿಸೋನಿಯಾ ಅವರ ಭಾಷಣವನ್ನು ಉಲ್ಲೇಖಿಸಿ,6.5 ಕೋಟಿ ಕನ್ನಡಿಗರಿಗೆ ಬಲವಾದ ಸಂದೇಶವನ್ನು ಕಳುಹಿಸುತ್ತಾರೆ” ಎಂದು ಕಾಂಗ್ರೆಸ್ ಟ್ವೀಟ್‌ ಮಾಡಿದ್ದು, ಸಾರ್ವಜನಿಕ ಸಭೆಯಲ್ಲಿ ಅವರು ಮಾತನಾಡುವ ಚಿತ್ರಗಳನ್ನು ಸಹ ಪೋಸ್ಟ್ ಮಾಡಿ ‘ಕರ್ನಾಟಕದ ಪ್ರತಿಷ್ಠೆ, ಸಾರ್ವಭೌಮತ್ವ ಅಥವಾ ಸಮಗ್ರತೆಗೆ ಧಕ್ಕೆ ತರಲು ಯಾರಿಗೂ ಅವಕಾಶ ನೀಡುವುದಿಲ್ಲ’ ಎಂದು  ಟ್ವೀಟ್ ನಲ್ಲಿ ಬರೆಯಲಾಗಿತ್ತು.

ಈ ಹೇಳಿಕೆಯನ್ನು “ಆಘಾತಕಾರಿ ಮತ್ತು ಸ್ವೀಕಾರಾರ್ಹವಲ್ಲ” ಎಂದು ಬಣ್ಣಿಸಿ ಕೇಂದ್ರ ಸಚಿವೆ,ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿಯ ಸಂಚಾಲಕಿ ಶೋಭಾ ಕರಂದ್ಲಾಜೆ ಅವರು ದೂರನ್ನು ದಾಖಲಿಸಿದ್ದು, ಗಾಂಧಿ ಅವರು ಮಾದರಿ ನೀತಿ ಸಂಹಿತೆಯ ನಿಬಂಧನೆಗಳನ್ನು ಉಲ್ಲಂಘಿಸಿದ್ದಾರೆ ಮತ್ತು ಇಂತಹ ಹೇಳಿಕೆಯನ್ನು ನೀಡಿದ್ದಕ್ಕಾಗಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಇಸಿಗೆ ಮನವಿ ಮಾಡಿದ್ದಾರೆ. ಎಫ್‌ಐಆರ್ ದಾಖಲಿಸಲು ಮತ್ತು ಅನುಕರಣೀಯ ದಂಡನಾತ್ಮಕ ಕ್ರಮ ಕೈಗೊಳ್ಳಲು ನಿರ್ದೇಶನ ನೀಡುವಂತೆ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next