Advertisement

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

07:31 PM Mar 29, 2024 | Team Udayavani |

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸುವ ಮೂಲಕ ಮಾದರಿ ನೀತಿ ಸಂಹಿತೆ (ಎಂಸಿಸಿ) ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಡಾ| ಯತೀಂದ್ರ ಸಿದ್ದರಾಮಯ್ಯ ಅವರ ವಿರುದ್ಧ ಬಿಜೆಪಿ ಶುಕ್ರವಾರ ಚುನಾವಣ ಆಯೋಗಕ್ಕೆ ದೂರು ನೀಡಿದೆ.

Advertisement

ಚುನಾವಣ ಆಯೋಗಕ್ಕೆ ಪತ್ರ ಬರೆದಿರುವ ಬಿಜೆಪಿಯ ರಾಜ್ಯ ಘಟಕ ಮಾಜಿ ಶಾಸಕ ಯತೀಂದ್ರ ಚುನಾವಣ ಆಯೋಗ ಹೊರಡಿಸಿದ ಮಾರ್ಗಸೂಚಿಗಳ ಪ್ರಕಾರ ಮಾದರಿ ನೀತಿ ಸಂಹಿತೆ ಅನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪ ಹೊರಿಸಿದೆ.

ನಮ್ಮ ನಾಯಕರ ಮೇಲಿನ ವೈಯಕ್ತಿಕ ದಾಳಿಯಾಗಿದ್ದು ಯತೀಂದ್ರ ಸಿದ್ದರಾಮಯ್ಯ ಸಂಪೂರ್ಣವಾಗಿ ಖಂಡನೀಯ ಹೇಳಿಕೆ ನೀಡಿದ್ದು, ಇದು ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ಮೇಲಿನ ವೈಯಕ್ತಿಕ ದಾಳಿಯಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಹನೂರು ನಗರದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾಂಗ್ರೆಸ್‌ ಕಾರ್ಯಕರ್ತರ ಸಭೆಯಲ್ಲಿ ಡಾ| ಯತೀಂದ್ರ ಅವರು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಓರ್ವ ಗೂಂಡಾ, ರೌಡಿ ಎಂದು ಹೇಳಿದ್ದರು. ಗುಜರಾತ್‌ನಲ್ಲಿ ನರಮೇಧ ಮಾಡಿದವರು ಯಾರು ಎಂದು ಪ್ರಶ್ನಿಸಿದರಲ್ಲದೆ, ಕ್ರಿಮಿನಲ್‌ ಚಟುವಟಿಕೆ ಹಿನ್ನೆಲೆಯುಳ್ಳ ಇವರು ಈಗ ದೇಶದ ಉನ್ನತ ಸ್ಥಾನದಲ್ಲಿದ್ದಾರೆ ಎಂದು ಟೀಕಿಸಿದ್ದರು. ದೇಶದ ಇತಿಹಾಸದಲ್ಲೇ ಪ್ರಜಾಪ್ರಭುತ್ವದ ಕತ್ತು ಹಿಸುಕುವ ಸರಕಾರ ಅಂದರೆ ಅದು ನರೇಂದ್ರ ಮೋದಿ ಸರಕಾರ ಎಂದು ವಾಗ್ಧಾಳಿ ನಡೆಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next