Advertisement

ಕರ್ನಾಟಕದಲ್ಲಿ ಮತ್ತೆ ಬಿಜೆಪಿ ಸರಕಾರ: ಗೋವಾ ಸಿಎಂ

05:46 PM Feb 08, 2023 | Team Udayavani |

ಮಂಗಳೂರು: ಕರ್ನಾಟದಲ್ಲಿ ಬಿಜೆಪಿ ಸರಕಾರದಿಂದ ಕಳೆದ ಐದು ವರ್ಷದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ನಡೆದಿದೆ. ಇದರಿಂದಾಗಿ ಮುಂದಿನ ಚುನಾವಣೆಯಲ್ಲೂ ಬಿಜೆಪಿ ಸರಕಾರವೇ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಗೋವಾ ಮುಖ್ಯಮಂತ್ರಿ ಡಾ| ಪ್ರಮೋದ್‌ ಸಾವಂತ್‌ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Advertisement

ಬುಧವಾರ ಮಂಗಳೂರಿನಲ್ಲಿ ನಡೆದ ಖಾಸಗಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಪ್ರಧಾನ ಮಂತ್ರಿಗಳ ನವ ಭಾರತ ನಿರ್ಮಾಣ ಕನಸಿಗೆ ಕರ್ನಾಟಕವೂ ಕೈಜೋಡಿಸಿದೆ.

ಇಲ್ಲಿನ ಡಬಲ್‌ ಎಂಜಿನ್‌ ಸರಕಾರ ಪ್ರಧಾನ ಮಂತ್ರಿಗಳ ಆಶಯಕ್ಕೆ ಪೂರಕವಾಗಿ ಕಾರ್ಯನಿರ್ವಹಿಸುತ್ತಿದೆ. ಮುಂದಿನ ಅವಧಿಯಲ್ಲಿ ಬಾಕಿ ಉಳಿದಿರುವ ಯೋಜನೆಗಳು ಪೂರ್ಣಗೊಳ್ಳುವ ಮೂಲಕ ನವಭಾರತದ ಜತೆಗೆ ನವ ಕರ್ನಾಟಕವೂ ನಿರ್ಮಾಣವಾಗಲಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next