Advertisement

BJP ಸರಕಾರದ್ದು ಕಮಿಷನ್‌ ಯೋಜನೆಗಳು: ಮಧು ಬಂಗಾರಪ್ಪ

12:15 AM Apr 06, 2024 | Shreeram Nayak |

ಶಿಕಾರಿಪುರ: ಬಿಜೆಪಿ ಸರಕಾರದ ಯೋಜನೆಗಳು ಕಮಿಷನ್‌ ಪಡೆಯುವ ಯೋಜನೆಗಳಾಗಿವೆ ಎಂದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಆರೋಪಿಸಿದರು.

Advertisement

ಪಟ್ಟಣದ ಕಾಂಗ್ರೆಸ್‌ ಕಚೇರಿಯಲ್ಲಿ ಗುರುವಾರ ನಡೆದ ಕಾಂಗ್ರೆಸ್‌ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳನ್ನು ನೀಡಲು ಕಾಂಗ್ರೆಸ್‌ ಸರಕಾರ ಹಾಗೂ ಕಾಂಗ್ರೆಸ್‌ ಮುಖಂಡರು ಯಾವುದೇ ಕಮಿಷನ್‌ ಪಡೆದಿಲ್ಲ. ಜನರ ತೆರಿಗೆ ದುಡ್ಡನ್ನು ಗ್ಯಾರಂಟಿ ಯೋಜನೆಗಳ ಮೂಲಕ ವಾಪಸ್‌ ಜನರಿಗೆ ನೀಡಿದ್ದೇವೆ. ಆದರೆ ಬಿಜೆಪಿ ಸರಕಾರ ನೀಡುವ ಯೋಜನೆಗಳು ಶೇ. 40ರಷ್ಟು ಕಮಿಷನ್‌ ಪಡೆಯುವಂಥವು. ಕಾಂಗ್ರೆಸ್‌ ಸರಕಾರ ನುಡಿದಂತೆ ನಡೆದಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ನೀಡಿದ ಗ್ಯಾರಂಟಿ ಯೋಜನೆಗಳ ಬಗ್ಗೆ ಮತದಾರರಿಗೆ ಮನ ಮುಟ್ಟುವಂತೆ ಹೇಳಬೇಕು. ಗೀತಾಕ್ಕಗೆ ಜಿಲ್ಲೆಯಲ್ಲಿ ಉತ್ತಮ ಸ್ವಾಗತ ದೊರೆತಿದ್ದು, ಹೆಚ್ಚು ಮತಗಳ ಅಂತರದಿಂದ ಗೆಲ್ಲುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next