Advertisement

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

11:47 PM Apr 24, 2024 | Team Udayavani |

ಕನಕಪುರ: ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಸ್ಪರ್ಧಿಸಲು ಬಿಜೆಪಿಯವರಿಗೆ ಅಭ್ಯರ್ಥಿ ಇರಲಿಲ್ಲವಂತೆ, ಎಚ್‌.ಡಿ. ಕುಮಾರಸ್ವಾಮಿಗೆ ಇಲ್ಲಿ ನಿಂತುಕೊಳ್ಳಲು ಧೈರ್ಯ ಇರಲಿಲ್ಲವಂತೆ. ಈ ಕಾರಣದಿಂದ ದೇವೇಗೌಡರ ಅಳಿಯ, ಕುಮಾರಸ್ವಾಮಿಯವರ ಬಾಮೈದನನ್ನು ಕರೆತಂದು ಚುನಾವಣೆಗೆ ನಿಲ್ಲಿಸಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ವ್ಯಂಗ್ಯವಾಡಿದರು.

Advertisement

ಬಹಿರಂಗ ಪ್ರಚಾರದ ಕೊನೆಯ ದಿನವಾದ ಬುಧವಾರ ಸ್ವಕ್ಷೇತ್ರದ ವಿವಿಧ ಕಡೆ ಬಿರುಸಿನ ಪ್ರಚಾರ ನಡೆಸಿ ತಮ್ಮ ಸಹೋದರನ ಪರ ಮತಯಾಚನೆ ಮಾಡಿದ ಅವರು, ಜೆಡಿಎಸ್‌ ಮತ್ತು ಬಿಜೆಪಿಯವರು ಯಾಕೆ ಸಮಯ ವ್ಯರ್ಥ ಮಾಡುತ್ತೀರಿ? ನಾವು ಜಾತಿ ಧರ್ಮ ನೋಡುವುದಿಲ್ಲ. ಎಲ್ಲರನ್ನೂ ಒಟ್ಟಿಗೆ ತೆಗೆದುಕೊಂಡು ಹೋಗುತ್ತೇವೆ.

ಕಾರ್ಯಕರ್ತರಲ್ಲಿ ಭಿನ್ನಾಭಿಪ್ರಾಯಗಳಿದ್ದರೆ ಅದನ್ನು ಬಿಟ್ಟು ನಿಮ್ಮ ತಾಲೂಕಿನ ಹಿತ ದೃಷ್ಟಿಯನ್ನು ನೋಡಿ ಎಂದು ವಿಪಕ್ಷದ ಮುಖಂಡರಿಗೆ ಬಹಿರಂಗವಾಗಿ ಆಹ್ವಾನ ನೀಡಿದರು.

 

Advertisement

Udayavani is now on Telegram. Click here to join our channel and stay updated with the latest news.

Next