Advertisement

Congress ಸರ್ಕಾರವನ್ನು‌ ಅಸ್ಥಿರಗೊಳಿಸುವ ಉದ್ದೇಶ ಬಿಜೆಪಿಗೆ ಇಲ್ಲ: ಪ್ರಹ್ಲಾದ ಜೋಶಿ

07:06 PM Aug 17, 2024 | Team Udayavani |

ಹುಬ್ಬಳ್ಳಿ: ಭ್ರಷ್ಟಾಚಾರ ಆರೋಪಕ್ಕೆ ಸಿಲುಕಿರುವ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಕೈಗೊಂಡ‌ ಕ್ರಮ ಸರಿಯಾಗಿ ಇದ್ದು, ತನಿಖೆಗೆ ಸಿಎಂ‌ ಸಹರಿಸಬೇಕು ಹಾಗೂ ನೈತಿಕ ಹೊಣೆ ಹೊತ್ತು ರಾಜೀನಾಮೆ ‌ನೀಡಬೇಕು ಎಂದು‌ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಒತ್ತಾಯಿಸಿದರು.

Advertisement

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ವಿಚಾರದಲ್ಲಿ‌ ರಾಜ್ಯಪಾಲರು ಅಳೆದು ತೂಗಿ ಕ್ರಮ ಕೈಗೊಂಡಿದ್ದಾರೆ ಎಂದು ರಾಜ್ಯಪಾಲರ ನಡೆ ಸರಿಯಾಗಿಯೇ ಇದೆ. ಸಿಎಂ ವಿರುದ್ದದ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿ ರಾಜ್ಯಪಾಲರು ಪ್ರಾಸಿಕ್ಯೂಶನ್ ಗೆ ಅನುಮತಿ ನೀಡಿದ್ದಾರೆ ಲೋಕಾಯುಕ್ತ ಅಥವಾ ಸ್ಥಳೀಯ ಅಧಿಕಾರಿಗಳಿಂದಲೇ ತನಿಖೆ ನಡೆಯಲಿದೆ.ಸಿಎಂ ಸಿದ್ದರಾಮಯ್ಯ ಅವರು ಕಾನೂನು ಹೋರಾಟ ಮಾಡಲಿ, ಸಿಎಂ‌ ತನಿಖೆಗೆ ಎಲ್ಲ ರೀತಿಯಿಂದ ಸಹಕರಿಸಲಿ ನೀಡಲಿ ಜತೆಗೆ ನೈತಿಕ ಹೊಣೆ ಹೊತ್ತು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದರು.

ರಾಜ್ಯ ಕಾಂಗ್ರೆಸ್ ಸರ್ಕಾರವನ್ನು‌ ಅಸ್ಥಿರಗೊಳಿಸುವ ಉದ್ದೇಶ ಬಿಜೆಪಿಗೆ ಇಲ್ಲ. ಜನ ಆ ಪಕ್ಷಕ್ಕೆ ಬಹುಮತ ನೀಡಿದ್ದಾರೆಕಾಂಗ್ರೆಸ್ ಐದು ವರ್ಷ ಆಡಳಿತ ನಡೆಸಲಿ‌ಎಂಬುದೇ ನಮ್ಮ‌ಬಯಕೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next