Advertisement

ತಿರಂಗಾ ಬಗ್ಗೆ ಮಾತಾಡುವ ಯಾವುದೇ ನೈತಿಕತೆ ಬಿಜೆಪಿಗಿಲ್ಲ: ಸಿದ್ದರಾಮಯ್ಯ

08:08 PM Aug 08, 2022 | Team Udayavani |

ನಂಜನಗೂಡು: ತಿರಂಗಾ ಬಗ್ಗೆ ಮಾತನಾಡುವ ಯಾವುದೇ ನೈತಿಕತೆ ಬಿಜೆಪಿ ನಾಯಕರಿಗೆ ಇಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.

Advertisement

ವರುಣಾ ವಿಧಾನಸಭಾ ಕ್ಷೇತ್ರದ ಸ್ವಾತಂತ್ರ್ಯ ಹೋರಾಟಗಾರ ತಗಡೂರು ರಾಮಚಂದ್ರ ರಾಯರ ಸ್ವಗ್ರಾಮ ತಗಡೂರಿನಲ್ಲಿ ಮಹಾತ್ಮಗಾಂಧಿ, ಅಂಬೇಡ್ಕರ್‌ ಹಾಗೂ ರಾಮಚಂದ್ರರಾಯರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಸ್ವಾತಂತ್ರ್ಯ ಅಮೃತಮಹೋತ್ಸವದ ಪಾದಯಾತ್ರೆಗೆ ಚಾಲನೆ ನೀಡಿ ಅವರು ಮಾತನಾಡಿದರು.

ಬಿಜೆಪಿಯ ಮಾತೃ ಸಂಸ್ಥೆ ಆರೆಸ್ಸೆಸ್‌ ರಾಷ್ಟ್ರ ಧ್ವಜವನ್ನು ಎಂದಿಗೂ ಗೌರವಯುತವಾಗಿ ಕಂಡಿಲ್ಲ. ಅದಕ್ಕೆ ದಾಖಲೆಗಳಿವೆ. ಬಿಜೆಪಿಯವರ್ಯಾರೂ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿರಲಿಲ್ಲ ಎಂದ ಅವರು, ಇಂತಹ ಹಿನ್ನೆಲೆ ಇರುವ ಬಿಜೆಪಿಯವರು ಈಗ “ಹರ್‌ ಘರ್‌ ತಿರಂಗಾ’ ಎಂದು ಬೂಟಾಟಿಕೆ ಪ್ರದರ್ಶಿಸುತ್ತಿದ್ದಾರೆಂದು ಆಕ್ರೋಶ ವ್ಯಕ್ತಪಡಿಸಿದರು.

ದೇಶವನ್ನು ಗುಲಾಮಗಿರಿಯಿಂದ ತಪ್ಪಿಸಿ, ಸ್ವಾತಂತ್ರ್ಯ ತಂದುಕೊಟ್ಟಿದ್ದು ಕಾಂಗ್ರೆಸ್‌ ಪಕ್ಷ ಮತ್ತು ಅಂದಿನ ಕಾಂಗ್ರೆಸ್‌ ನಾಯಕರು. ಬಿಜೆಪಿಗೆ ಮತ ನೀಡಿ ಗೆಲ್ಲಿಸಿದರೆ ರಾಷ್ಟ್ರದ ಸರ್ವನಾಶ ಖಂಡಿತ. ಅದಕ್ಕಾಗಿ ಬಿಜೆಪಿಗೆ ಪಾಠ ಕಲಿಸಿ ಎಂದು ಸಿದ್ದರಾಮಯ್ಯ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next