Advertisement

ಬಿಜೆಪಿಯವರಿಗೆ ಮಾಡಲು ಬೇರೆ ಕೆಲಸವಿಲ್ಲ: ಜಾರ್ಜ್‌

07:50 AM Oct 29, 2017 | Team Udayavani |

ಬೆಂಗಳೂರು: “ರಾಜ್ಯ ಬಿಜೆಪಿಯವರಿಗೆ ಮಾಡಲು ಬೇರೆ ಕೆಲಸ ಇಲ್ಲ. ಹೀಗಾಗಿ, ನನ್ನ ರಾಜೀನಾಮೆಗೆ ಆಗ್ರಹಿಸುತ್ತಿದ್ದಾರೆ” ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ. ಜಾರ್ಜ್‌ ಹೇಳಿದ್ದಾರೆ.

Advertisement

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,ಡಿವೈಎಸ್‌ಪಿ ಗಣಪತಿ ಸಾವಿನ ಕುರಿತು ಸಿಬಿಐ ತನಿಖೆ ನಡೆಸಿ ಮೂರು
ತಿಂಗಳಲ್ಲಿ ವರದಿ ನೀಡಲಿದೆ. ಅಲ್ಲಿ ಯವರೆಗೆ ಕಾದು ನೋಡಲು ಬಿಜೆಪಿಯವರಿಗೆ ಏನು ಕಷ್ಟ ? ಬಿಜೆಪಿಯವರು ಇದುವರೆಗೂ ಯಾವುದೇ ಅಧಿವೇಶನವನ್ನು ಸರಿಯಾಗಿ ನಡೆಸಲು ಬಿಟ್ಟಿಲ್ಲ. ಅವರಿಗೆ ಜನರ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಲು ಇಷ್ಟ ಇಲ್ಲ. ಹೀಗಾಗಿ ಹೋರಾಟ ಮಾಡುತ್ತಾರೆ. ಬಿಜೆಪಿಯವರನ್ನು ಕೇಳಿ ಸರ್ಕಾರ ಅಧಿವೇಶನ ನಡೆಸುತ್ತಿಲ್ಲ ಎಂದು ಜಾರ್ಜ್‌ ಕಿಡಿ ಕಾರಿದರು.

Advertisement

Udayavani is now on Telegram. Click here to join our channel and stay updated with the latest news.

Next