Advertisement

BJP ಮನೆಯೊಂದು ಮೂರು ಬಾಗಿಲಾಗಿದ್ದು 20 ವರ್ಷ ವಿಪಕ್ಷದಲ್ಲಿರಲಿದೆ: ಸವದಿ

03:11 PM Nov 20, 2023 | Team Udayavani |

ವಿಜಯಪುರ: ಮನೆಯೊಂದು ಮೂರು ಬಾಗಿಲಾಗಿರುವ ಹಾಗೂ ರಾಜಕೀಯ ಭವಿಷ್ಯವಿಲ್ಲದ ಬಿಜೆಪಿ ಬರುವ 20 ವರ್ಷಗಳ ಕಾಲ ವಿಪಕ್ಷದಲ್ಲೇ ಇರಲಿದೆ ಎಂದು ಕಾಂಗ್ರೆಸ್ ಹಿರಿಯ ಶಾಸಕ ಲಕ್ಷ್ಮಣ ಸವದಿ ವಾಗ್ದಾಳಿ ನಡೆಸಿದರು.

Advertisement

ಸೋಮವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಬಿಜೆಪಿ ಪಕ್ಷದಲ್ಲಿ ತತ್ವ, ಸಿದ್ಧಾಂತ ಗಾಳಿಗೆ ತೋರಲಾಗಿದೆ ಎಂದು ಕಾಂಗ್ರೆಸ್ ಶಾಸಕನಾಗಿ ನಾನು ಹೇಳಿದ್ದಲ್ಲ, ಅದೇ ಪಕ್ಷದ ಹಿರಿಯ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರೇ ಹೇಳಿರುವುದು ಎಂದು ಕುಟುಕಿದರು.

ರಾಮಕೃಷ್ಣ ಹೆಗಡೆ ಅವರ ಅಪ್ಪಟ ಬೆಂಬಲಿಗರಾಗಿದ್ದ ನಾವು, ಅವರು ಇರುವ ವರೆಗೆ ಜತೆಯಲ್ಲಿದ್ದೆವು. ತಮ್ಮ ಅನಾರೋಗ್ಯದ ಪರಿಸ್ಥಿತಿ ಸಂದರ್ಭದಲ್ಲಿ ಲಾಲಕೃಷ್ಣ ಅಡ್ವಾಣಿ ಅವರು ನಮ್ಮನ್ನು ಸಂಪರ್ಕಿಸಿ ಬಿಜೆಪಿ ಸೇರ್ಪಡೆ ಮಾಡಿಸಿದ್ದರು.‌ ಆಗ ಬಿಜೆಪಿ ಪಕ್ಷದಲ್ಲಿ ಅನಂತಕುಮಾರರ್ ಅವರಂಥಹ ನಾಯಕರಿದ್ದರು. ಈಗ ಬಿಜೆಪಿ ಪಕ್ಷದಲ್ಲಿ ಅಂಥ ನಾಯಕರಿಲ್ಲ. ಕುಟುಂಬ ರಾಜಕೀಯ ಮತ್ತು ಆಂತರಿಕ ಸಂಘರ್ಷದಿಂದ ಬಿಜೆಪಿ ತತ್ತರಿಸಿದೆ ಎಂದರು.

ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ 135 ಶಾಸಕ ಬಲದೊಂದಿಗೆ ಸಿದ್ದರಾಮಯ್ಯ ಸರ್ಕಾರ ಸುಭದ್ರವಾಗಿದೆ. ಹೀಗಾಗಿ ಯಾವ ಪಕ್ಷವನ್ನು ಯಾರು ತೊರೆಯಲಿದ್ದಾರೆ ಎಂದು ಕಾದು ನೋಡಿ.ಕಾಂಗ್ರೆಸ್ ಸರ್ಕಾರದ ಜನಪರ ಯೋಜನೆಗಳಾದ ಗ್ಯಾರಂಟಿ ಯೋಜನೆಗಳಿಂದ ಜನರು ಸಂತೃಪ್ತರಾಗಿದ್ದಾರೆ. ಇದನ್ನು ಸಹಿಸಲಾಗದ ಬಿಜೆಪಿ ನಾಯಕರು ಟೀಕೆ ಮಾಡುತ್ತಿದ್ದಾರೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next