Advertisement

ಗದ್ದಲಕ್ಕೆ ಹೈಕಮಾಂಡ್‌ ಸೂಚನೆ: ನಾಣಯ್ಯ

01:10 AM Feb 07, 2019 | Team Udayavani |

ಬೆಂಗಳೂರು: ಬಿಜೆಪಿ ಹೈಕಮಾಂಡ್‌ ಸೂಚನೆ ಮೇರೆಗೆ ಬಿಜೆಪಿ ಶಾಸಕರು ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರ ಭಾಷಣಕ್ಕೆ ಅಡ್ಡಿಪಡಿಸಿದ್ದಾರೆ ಎಂದು ಮಾಜಿ ಸಚಿವ ಎಂ.ಸಿ.ನಾಣಯ್ಯ ಆರೋಪಿಸಿದ್ದಾರೆ.

Advertisement

ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ನಿರ್ದೇಶನದ ಮೇರೆಗೆ ಎಲ್ಲವೂ ನಡೆದಿದೆ. ಮೋದಿ ಹಾಗೂ ಅಮಿತ್‌ ಶಾ ಅವರು ರಾಜ್ಯದಲ್ಲಿ ರೈತರ ಸಾಲ ಮನ್ನಾ ಲಾಲಿಪಪ್‌ ಎಂದು ಲೇವಡಿ ಮಾಡಿದ್ದರು. ಇದೀಗ ಜಂಟಿ ಅಧಿವೇಶನದಲ್ಲಿ ತಮ್ಮದೇ ಸರ್ಕಾರ ನೇಮಿಸಿದ ರಾಜ್ಯಪಾಲರು ನನ್ನ ಸರ್ಕಾರ ಸಾಲಮನ್ನಾ ಮಾಡಿ ರೈತರಿಗೆ ಅನುಕೂಲ ಮಾಡಿದೆ. ಸಮ್ಮಿಶ್ರ ಸರ್ಕಾರ ಸಾಧನೆ ಮಾಡಿದೆ ಎಂದು ಹೇಳುವುದು ಇಷ್ಟವಿಲ್ಲ ಎಂದು ಆಪಾದಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next