Advertisement

ವಿಜಯೇಂದ್ರ ಸ್ಪರ್ಧೆ ಬಗ್ಗೆ ಹೈಕಮಾಂಡ್ ಅಂತಿಮ ತೀರ್ಮಾನ, ನನ್ನದು ಸಲಹೆ ಮಾತ್ರ: ಯಡಿಯೂರಪ್ಪ

03:47 PM Jul 23, 2022 | Team Udayavani |

ಬೆಂಗಳೂರು: ಶಿಕಾರಿಪುರದಲ್ಲಿ ವಿಜಯೇಂದ್ರ ಸ್ಪರ್ಧೆ ಬಗ್ಗೆ ಶುಕ್ರವಾರ ನಾನು ನೀಡಿದ ಹೇಳಿಕೆ ಬಗ್ಗೆ ಸಾಕಷ್ಟು ಗೊಂದಲವಾಗಿದೆ. ನಾನು ವಿಧಾನಸಭೆ ಚುನಾವಣೆಗೆ ನಿಲ್ಲುವುದಿಲ್ಲ. ನನಗೆ ಶಿಕಾರಿಪುರದ ಜನ ಚುನಾವಣೆಗೆ ಸ್ಪರ್ಧಿಸಲು ಒತ್ತಾಯ ಮಾಡಿದರು.  ಆದರೆ ನಾನು ನಿಲ್ಲುವುದಿಲ್ಲ, ವಿಜಯೇಂದ್ರ ಸ್ಪರ್ಧೆ ಮಾಡುತ್ತಾರೆ ಎಂದು ಹೇಳಿದೆ. ನೆನ್ನೆ ಅಲ್ಲಿಯ ಜನ ಒತ್ತಾಯ ಮಾಡಿದ ಕಾರಣ ನಾನು ಹಾಗೆ ಹೇಳಿದ್ದೇನೆ. ಆದರೆ ಇದರ ಬಗ್ಗೆ ಅಂತಿಮ ತಿರ್ಮಾನ ಮಾಡುವುದು ಮೋದಿ, ಅಮಿತ್ ಶಾ ಮತ್ತು ಜೆಪಿ ನಡ್ಡಾ ಅವರೇ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆ ಬಗ್ಗೆ ಪಕ್ಷದ ತೀರ್ಮಾನವೇ ಅಂತಿಮ. ನನ್ನದೇನಿದ್ದರೂ ಸಲಹೆ ಅಷ್ಟೇ.  ವಿಜಯೇಂದ್ರ ಎಲ್ಲಿಂದ ಸ್ಪರ್ಧೆ ಮಾಡಿದರೂ ಗೆಲ್ಲುವ ಒಂದು ಸಾಮರ್ಥ್ಯ ಬೆಳೆಸಿಕೊಂಡಿದ್ದಾರೆ. ಹಳೆ ಮೈಸೂರು, ಶಿಕಾರಿಪುರ ಎಲ್ಲೇ ನಿಂತರು ಅವರು ಗೆಲ್ಲುತ್ತಾರೆ. ಆದರೆ ಅಂತಿಮವಾಗಿ ತೀರ್ಮಾನ ಮಾಡುದು ಪ್ರಧಾನಿ ಮೋದಿ ಎಂದರು.

ವಿಜಯೇಂದ್ರ ಸ್ಪರ್ಧೆಯಿಂದ ಕುಟುಂಬ ರಾಜಕೀಯದ ಆಗುವುದಿಲ್ಲವೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ನಾನು ಚುನಾವಣೆ ಸ್ಪರ್ಧೆ ಮಾಡುತ್ತಿಲ್ಲ‌, ನನ್ನ ಮಗ ಸ್ಪರ್ಧಿಸುತ್ತಾರೆ. ಈ ಕಾರಣಕ್ಕೆ ನಾನು ಚುನಾವಣೆಯಿಂದ ಹಿಂದೆ ಸರಿದ್ದೇನೆ ಎಂದು ಸ್ಪಷ್ಟನೆ ನೀಡಿದರು.

ಪಿಎಸ್ ಐ ಹಗರಣದಲ್ಲಿ ವಿಜಯೇಂದ್ರ ಭಾಗಿ ಎಂಬ ಸಿದ್ದರಾಮಯ್ಯ ಆರೋಪಕ್ಕೆ ಯಡಿಯೂರಪ್ಪ ಗರಂ ಆದರು. “ಇದು ಮುರ್ಖತನದ ಪರಮಾವಧಿಯ ಹೇಳಿಕೆ. ಇದನ್ನು ವಾಪಸ್ ಪಡೆಯಬೇಕು. ‘ತಾ ಕಳ್ಳ ಪರರ ನಂಬ’” ಎಂದು ತಿರುಗೇಟು ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next