Advertisement

ಗ್ರಾಮೀಣ ಅಭಿವೃದ್ಧಿಗೆ ಬಿಜೆಪಿ ಸದಾ ಬದ್ಧ : ಪ್ರಮೋದ ಸಾವಂತ್

04:30 PM Aug 21, 2021 | Team Udayavani |

ಪಣಜಿ: ಗ್ರಾಮೀಣ ಭಾಗದ ಅಭಿವೃದ್ಧಿಗಾಗಿ ಬಿಜೆಪಿ ಕಂಕಣಬದ್ಧವಾಗಿದೆ. ಸಂಕಷ್ಟದ ಮೇಲೆ ಸಂಕಷ್ಟ ಬರುತ್ತಿದ್ದರೂ ಕೂಡ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳೂ ನಿಂತಿಲ್ಲ. ಇನ್ನುಳಿದ 6 ತಿಂಗಳ ಅಧಿಕಾರಾವಧಿಯಲ್ಲಿ ಬಾಕಿ ಉಳಿದ ಎಲ್ಲಾ ಅಭಿವೃದ್ಧಿ ಕಾರ್ಯಗಳನ್ನೂ ಪೂರ್ಣಗೊಳಿಸಲಾಗುವುದು. “ಹರ್ ಘರ್ ನಲ್ ಹರ್ ಘರ್ ಜಲ್” ಯೋಜನೆ ಜಾರಿಗೆ ತಂದಿರುವ ದೇಶದ ಮೊದಲ ರಾಜ್ಯ ಗೋವಾ ರಾಜ್ಯವಾಗಿದೆ ಎಂದು ಮುಖ್ಯಮಂತ್ರಿ ಪ್ರಮೋದ ಸಾವಂತ್ ನುಡಿದರು.

Advertisement

ಸಾವರ್ಡೆ ಮತ ಕ್ಷೇತ್ರದಲ್ಲಿ ಆಯೋಜಿಸಿದ್ದ ಬಿಜೆಪಿ ಸಭೆಯನ್ನುದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಸಾವಂತ್- ಕಳೆದ ಎರಡು ವರ್ಷ ಕೋವಿಡ್‌  ಮಹಾಮಾರಿಯಿಂದಾಗಿ ಹೆಚ್ಚಿನ ತೊಂದರೆ ಅನುಭವಿಸುವಂತಾಯಿತು. ಆದರೆ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳೂ ನಿಂತಿಲ್ಲ. ಕರೋನಾದಿಂದ ಸಾವನ್ನಪ್ಪಿದ ವ್ಯಕ್ತಿಯ ಕುಟುಂಬಕ್ಕೆ 2 ಲಕ್ಷ ರೂ. ಅನುದಾನ ನೀಡುತ್ತಿರುವ ದೇಶದ ಮೊದಲ ರಾಜ್ಯ ಗೋವಾ ರಾಜ್ಯವಾಗಿದೆ ಎಂದು ಮುಖ್ಯಮಂತ್ರಿ ಸಾವಂತ್ ನುಡಿದರು.

ಇದನ್ನೂ ಓದಿ:ತಿಹಾರ್, ಹಿಂಡಲಗಾ ಜೈಲಿನಿಂದ ಹೊರಬಂದವರೇ ಕಾಂಗ್ರೆಸ್ ಪಕ್ಷಕ್ಕೆ ಶ್ರೇಷ್ಠರು: ಬಿಜೆಪಿ ಟೀಕೆ

ಈ ಸಂದರ್ಭದಲ್ಲಿ ಲೋಕೊಪಯೋಗಿ ಸಚಿವ ದೀಪಕ್ ಪಾವುಸ್ಕರ್, ರಾಜ್ಯಸಭಾ ಸದಸ್ಯ ವಿನಯ್ ತೆಂಡುಲ್ಕರ್, ಎನ್‍ಆರ್‍ಐ ಆಯುಕ್ತ ನರೇಂದ್ರ ಸಾವೈಕರ್, ದಕ್ಷಿಣ ಗೋವಾ ಜಿಪಂ ಅಧ್ಯಕ್ಷೆ ಸುವರ್ಣಾ ತೆಂಡುಲ್ಕರ್ ಮತ್ತಿತರರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next