Advertisement
ಸಂವಿಧಾನ ಉಳಿವಿಗಾಗಿ ಹೋರಾಟ ಸಮಿತಿ ವತಿಯಿಂದ ನಗರದ ಅಂಡೆ ಛತ್ರದ ಬಳಿ ಏರ್ಪಡಿಸಿದ್ದ ಸ್ವಾಭಿಮಾನಿ ಸಮಾವೇಶದಲ್ಲಿ ಅವರು ಮಾತನಾಡಿದರು. ನಾನು ಯಾವುದೇ ಪಕ್ಷದ ವಕ್ತಾರನಲ್ಲ. ಸಂವಿಧಾನ ಉಳಿಸುವುದನ್ನು ಮನಗಂಡು ಈ ಚುನಾವಣೆಯಲ್ಲಿ ಮತದಾನ ಮಾಡಬೇಕಿದೆ ಎಂದು ಹೇಳಿದರು.
Related Articles
Advertisement
ದೇಶದಲ್ಲಿ ಸಾಲಬಾಧೆ, ಬೆಳೆ ನಷ್ಟದಿಂದ ಬಹಳಷ್ಟು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದರೆ, ಪ್ರಧಾನಿ ಮೋದಿ ಅವರು ಒಬ್ಬ ರೈತರ ಮನೆಗೂ ಭೇಟಿ ನೀಡಿ ಸಾಂತ್ವನ ಹೇಳಿಲ್ಲ. ಮೋದಿ ಅವರೊಬ್ಬ ಮಹಾನ್ ನಾಟಕಕಾರ, ಖಳನಟ. ನಟನೆಯಲ್ಲಿ ಪ್ರಕಾಶ್ ರೈ, ನಾನಾ ಪಟೇಕರ್, ಅಮಿತಾಬ್ ಬಚ್ಚನ್ ಅವರನ್ನೂ ಮೀರಿಸುತ್ತಾರೆ ಎಂದು ಕುಟುಕಿದರು.
ಬಿಜೆಪಿಯವರು ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಎಂದು ಹೇಳುತ್ತಾರೆ. ಆದರೆ, ಯಾರ ವಿಕಾಸ ಆಗಿದೆ ಎಂಬುದು ಗೋಚರಿಸುತ್ತಿಲ್ಲ. ಕರ್ನಾಟಕದ ಈ ಚುನಾವಣೆಯಿಂದ ಬಿಜೆಪಿಯ ಪತನ ಆರಂಭವಾಗಲಿದೆ. ಮುಂದೆ ನಡೆಯಲಿರುವ ರಾಜಸ್ತಾನ, ಮಧ್ಯಪ್ರದೇಶ ಚುನಾವಣೆಗಳಲ್ಲೂಅದು ಮುಂದುವರಿಯಲಿದೆ. ಮೋದಿ ಅವರು ರಾಮಮಂದಿರ ಹೊತ್ತು, ಹಿಮಾಲಯಕ್ಕೆ ಹೋಗುವ ಸ್ಥಿತಿ ನಿರ್ಮಾಣವಾಗುತ್ತದೆ’ ಎಂದು ಭವಿಷ್ಯ ನುಡಿದರು.
ಇಲ್ಲಿ ಮಾತನಾಡುವುದಕ್ಕೂ ನಮಗೆ ನಿರ್ಬಂಧ ಹೇರಲು ಬಿಜೆಪಿಯವರು ಯತ್ನಿಸಿದರು. ಮಾತನಾಡುವುದಕ್ಕೆ ನಿರ್ಬಂಧ ವಿಧಿಸಲು ಮುಂದಾಗುತ್ತಾರೆ ಎಂದರೆ, ಅಂಥವರಿಂದ ಅಚ್ಛೆ ದಿನ್ ನಿರೀಕ್ಷಿಸುವುದು ಹೇಗೆ? ನಮ್ಮ ಭಾಷಣಕ್ಕೆ ಭಯಪಟ್ಟರೆ ಹೇಗೆ? ಮತದಾರರು ಯೋಚಿಸಿ ಹಕ್ಕನ್ನು ಚಲಾಯಿಸಬೇಕು. ಸಂವಿಧಾನ ವಿರೋಧಿಗಳನ್ನು ಬೆಂಬಲಿಸಬಾರದು ಎಂದು ಮನವಿ ಮಾಡಿದರು.