Advertisement

ಬಿಜೆಪಿಗೆ ಹೆಚ್ಚು ಸ್ಥಾನ ಖಚಿತ: ಬಿಎಸ್‌ವೈ

07:00 AM Aug 09, 2018 | Team Udayavani |

ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಅತಿ ಹೆಚ್ಚು ಸ್ಥಾನ ಗೆಲ್ಲಲಿದೆ ಎಂದು ಪ್ರತಿಪಕ್ಷ ನಾಯಕ ಬಿ.ಎಸ್‌.ಯಡಿಯೂರಪ್ಪ ತಿಳಿಸಿದ್ದಾರೆ.

Advertisement

ಸುದ್ದಿಗಾರರ ಜತೆ ಮಾತನಾಡಿದ ಅವರು, ಕಾಂಗ್ರೆಸ್‌-ಜೆಡಿಎಸ್‌  ಈ ಚುನಾವಣೆಯಲ್ಲಿ ಒಟ್ಟಿಗಾದರೂ ಹೋಗಲಿ, ಬೇರೆಯಾಗಿ ಆದರೂ ಹೋಗಲಿ. ನಮಗೆ ಸಂಬಂಧವಿಲ್ಲ.  ನಮ್ಮ ಪಕ್ಷ ಹೆಚ್ಚು ಸೀಟು ಗೆಲ್ಲುವತ್ತ ನಮ್ಮ ಗಮನ ಇರುತ್ತದೆ ಎಂದು ಹೇಳಿದರು.

ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಪಕ್ಷ ಗಂಭೀರವಾಗಿಯೇ ಪರಿಗಣಿಸಿದೆ. ಎಲ್ಲ ನಾಯಕರು ಜತೆಗೂಡಿ ಬಿಜೆಪಿಯ ಶಕ್ತಿ ತೋರಿಸಲಿದ್ದೇವೆ ಎಂದರು.

ದೆಹಲಿಯಲ್ಲಿ ಪ್ರಧಾನಿ ನರೇಂದ್ರಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರನ್ನು ಭೇಟಿ ಮಾಡಿ ಬಂದಿದ್ದೇನೆ.  ರಾಜ್ಯದ ಪ್ರಸಕ್ತ ವಿದ್ಯಮಾನಗಳು ಹಾಗೂ ಮುಂದೆ ಇಡಬೇಕಾದ ಹೆಜ್ಜೆಗಳ ಕುರಿತು ಚರ್ಚೆ ಮಾಡಿದ್ದೇನೆ.ನಮ್ಮ ರಾಜ್ಯಕ್ಕೆ ಆಗಬೇಕಿರುವ ಕೆಲಸಗಳ ಬಗ್ಗೆ ಕೇಂದ್ರ ಸಚಿವರ ಬಳಿ ಮಾತನಾಡಿದ್ದೇನೆ ಎಂದು ಹೇಳಿದರು.

ಬೀದರ್‌ನಿಂದ ರಾಜ್ಯ ಪ್ರವಾಸ ಆರಂಭಿಸಲಿದ್ದು ಕೆಲವು ಜಿಲ್ಲೆಗಳಲ್ಲಿ ಬರ ಪರಿಸ್ಥಿತಿ ಇದೆ. ಅದನ್ನೂ ಅವಲೋಕಿಸುತ್ತೇನೆ. ರಾಜ್ಯ ಸರ್ಕಾರದ ವೈಫ‌ಲ್ಯಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡುತ್ತೇವೆ ಎಂದು ತಿಳಿಸಿದರು.

Advertisement

ಡಿಕೆಶಿಗೆ ಅಭದ್ರತೆ
ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಶಾಸಕರ ಮೇಲೆ ಆ ಪಕ್ಷದ ನಾಯಕರಿಗೆ ನಂಬಿಕೆಯಿಲ್ಲ. ಹೀಗಾಗಿ, ನಮ್ಮ ಮೇಲೆ ತಪ್ಪು ಹಾಕುತ್ತಿದ್ದಾರೆ. ಡಿ.ಕೆ.ಶಿವಕುಮಾರ್‌ ಕೆಲವು ಶಾಸಕರಿಗೆ ಮಂತ್ರಿ ಮಾಡುವ ಭರವಸೆ ನೀಡಿದ್ದರು. ಆದರೆ, ಸಾಧ್ಯವಾಗಲಿಲ್ಲ.  ಇದೀಗ ಶಾಸಕರು ಅವರ ಬೆನ್ನು ಬಿದ್ದಿದ್ದಾರೆ. ಹೀಗಾಗಿ, ಶಿವಕುಮಾರ್‌ಗೆ ಅಭದ್ರತೆ ಕಾಡುತ್ತಿದೆ. ಕಾಂಗ್ರೆಸ್‌ ಶಾಸಕರು ನಮ್ಮ ಟಚ್‌ನಲ್ಲಿ ಇದ್ದಾರೆ ಅಥವಾ ಇಲ್ಲ ಎಂದು ನಾವು ಹೇಳುವುದು ಸರಿಯಲ್ಲ.
– ಶ್ರೀರಾಮುಲು

Advertisement

Udayavani is now on Telegram. Click here to join our channel and stay updated with the latest news.

Next