Advertisement

“ಬಿಜೆಪಿ ಯಾವುದೇ ಆಪರೇಷನ್‌ ಮಾಡುತ್ತಿಲ್ಲ: ಯಡಿಯೂರಪ್ಪ ಕಿಡಿ 

12:35 AM Jan 18, 2019 | Team Udayavani |

ಬೆಂಗಳೂರು: ನಾವು ಯಾವುದೇ ರೀತಿಯ ಆಪರೇಷನ್‌ ಮಾಡುತ್ತಿಲ್ಲ. ಕಾಂಗ್ರೆಸ್‌, ಜೆಡಿಎಸ್‌ ಶಾಸಕರನ್ನು ಸೆಳೆಯುತ್ತಿಲ್ಲ. ತಮ್ಮ ಹುಳುಕು ಮುಚ್ಚಿಕೊಳ್ಳಲು ನಮ್ಮ ಮೇಲೆ ಗೂಬೆ ಕೂರಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಕಿಡಿ ಕಾರಿದ್ದಾರೆ.

Advertisement

ನಗರದಲ್ಲಿ ಗುರುವಾರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್‌ ನಾಯಕರು ಸಂವಿಧಾನದ ಬಗ್ಗೆ ಮಾತನಾಡು ತ್ತಿದ್ದಾರೆ. ಅವರು ಈ ಹಿಂದೆ ಏನು ಮಾಡಿದ್ದರು ಎಂಬುದು ಎಲ್ಲರಿಗೂ ಗೊತ್ತಿದೆ. ಹಿಂದೆ ಎಸ್‌.ಎಂ.ಕೃಷ್ಣ ಅವರು ಮುಖ್ಯಮಂತ್ರಿ ಯಾಗಿದ್ದಾಗ ಮಹಾರಾಷ್ಟ್ರದ ಶಾಸಕರನ್ನು ಮೈಸೂರಿನಲ್ಲಿ ಇರಿಸಲಾಗಿತ್ತು. ಆಗ ಪ್ರಜಾಪ್ರಭುತ್ವ ಎಲ್ಲಿ ಹೋಗಿತ್ತು ಮಲ್ಲಿಕಾರ್ಜುನ ಖರ್ಗೆ ಅವರೇ ಎಂದು ಪ್ರಶ್ನಿಸಿದರು.

ದೇವೇಗೌಡ ಸಮಯಸಾಧಕ ರಾಜಕಾರಣಿ: ಜೆಡಿಎಸ್‌ ವರಿಷ್ಠರಾದ ಎಚ್‌.ಡಿ.ದೇವೇಗೌಡರು ಇಂದು ಮಾತನಾಡುತ್ತಿದ್ದಾರೆ. ಇವರಂತಹ ಸಮಯ ಸಾಧಕ ರಾಜಕಾರಣಿ ರಾಜ್ಯದಲ್ಲಿ ಯಾರೂ ಇಲ್ಲ. ಇವರ ತತ್ವ, ಸಿದ್ಧಾಂತ ಕುಟುಂಬದವರನ್ನು ಕಾಪಾಡಿಕೊಳ್ಳುವುದಷ್ಟೆ.

ಈ ಹಿಂದೆ ಖರ್ಗೆ, ಸಿದ್ದರಾಮಯ್ಯ ಅವರಿಗೆ ಮುಖ್ಯಮಂತ್ರಿ ಪಟ್ಟ ತಪ್ಪಿಸಿದ್ದು, ಇದೇ ದೇವೇಗೌಡರು. ನಮ್ಮ ಮೇಲೆ ವಿನಾಕಾರಣ ಆರೋಪ ಮಾಡುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಶುಕ್ರವಾರ ಕಾಂಗ್ರೆಸ್‌ ಶಾಸಕಾಂಗ ಸಭೆ ನಡೆಯಲಿದ್ದು, ಎಷ್ಟು ಶಾಸಕರು ಸಭೆಗೆ ಹಾಜರಾಗುತ್ತಾರೋ ನೋಡೋಣ. ಇವರ ಬಣ್ಣ ಬಯಲಾಗಲಿದೆ ಎಂದರು

Advertisement

Udayavani is now on Telegram. Click here to join our channel and stay updated with the latest news.

Next