Advertisement

ಬಿಜೆಪಿಯವರು ಹಿಂದೂಗಳಲ್ಲ: ಜಾರ್ಜ್‌

12:21 PM Apr 15, 2018 | |

ಬೆಂಗಳೂರು: ಬಿಜೆಪಿಯವರಿಗೆ ಹಿಂದೂಗಳು ಎಂದು ಹೇಳಿಕೊಳ್ಳಲು ಹಕ್ಕಿಲ್ಲ ಎಂದು ನಗರಾಭಿವೃದ್ಧಿ ಸಚಿವ ಕೆ.ಜೆ. ಜಾರ್ಜ್‌ ಹೇಳಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಎಲ್ಲ ಹಿಂದೂಗಳು ಇರುವುದು ಕಾಂಗ್ರೆಸ್‌ನಲ್ಲಿ ಮಾತ್ರ. ಬಿಜೆಪಿಯವರು ಭಜರಂಗದಳ- ಶ್ರೀರಾಮಸೇನೆಯವರು ಎಂದು ದೂರಿದರು.

Advertisement

ರಾಜ್ಯ ಸರ್ಕಾರವನ್ನು ಭ್ರಷ್ಟ ಸರ್ಕಾರ ಎಂದು ಕರೆಯುವ ಬಿಜೆಪಿಯಲ್ಲಿಯೇ ಭ್ರಷ್ಟರಿದ್ದಾರೆ. ಕಾಂಗ್ರೆಸ್‌ ಸರ್ಕಾರ ಯಾವುದೇ ಹಗರಣಗಳಿಲ್ಲದೇ ಉತ್ತಮ ಆಡಳಿತ ನೀಡಿದೆ. ಕಾಂಗ್ರೆಸ್‌ ಎಲ್ಲ ಸಮುದಾಯಗಳನ್ನು ಒಳಗೊಂಡ ಪಕ್ಷ, ಶೋಷಿತರು ಮತ್ತು ದೌರ್ಜನ್ಯಕ್ಕೊಳಗಾದವರನ್ನು ಮೇಲೆತ್ತುವ ಕೆಲಸ ಮಾಡಿದೆ. ಬಾಬಾಸಾಹೇಬ್‌ ಅಂಬೇಡ್ಕರ್‌ ಕೊಟ್ಟಿರುವ ಸಂವಿಧಾನವನ್ನು ಕಾಂಗ್ರೆಸ್‌ ಉಳಿಸಿಕೊಂಡು ಬಂದಿದೆ. ಮೋದಿ ಪ್ರಧಾನಿಯಾಗಿದ್ದೂ ಕೂಡ ಇದೇ ಸಂವಿಧಾನದಿಂದಲೇ ಎಂದು ಹೇಳಿದರು.

ಸಮಾಜ ಕಲ್ಯಾಣ ಸಚಿವ ಎಚ್‌.ಆಂಜನೇಯ ಮಾತನಾಡಿ, ಅಂಬೇಡ್ಕರ್‌ ಚಿಂತಿಸಿದ್ದ ಎಲ್ಲ ಕಾರ್ಯಕ್ರಮಗಳನ್ನು ರಾಜ್ಯ ಕಾಂಗ್ರೆಸ್‌ ಸರ್ಕಾರ ಜಾರಿಗೆ ತಂದಿದೆ. ಅಂಬೇಡ್ಕರ್‌ ಸ್ಕೂಲ್‌ ಆಫ್ ಎಕನಾಮಿಕ್ಸ್‌, ಅಂಬೇಡ್ಕರ್‌ ವಸತಿ ಶಾಲೆ, ದಲಿತರಿಗಾಗಿ ಉಪ ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಹೇಳಿದರು. ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್‌ ಗುಂಡೂರಾವ್‌, ಕೇಂದ್ರದ ಮಾಜಿ ಸಚಿವ ಎಂ.ವಿ.ರಾಜಶೇಖರನ್‌, ಮಾಜಿ ಸಚಿವೆ ರಾಣಿ ಸತೀಶ್‌ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next