Advertisement

ಗಲಭೆಗೆ ಬಿಜೆಪಿಯವರದ್ದೇ ಪ್ರಚೋದನೆ: ಉಡುಪಿ ಮಠದಲ್ಲಿ ಪರಮೇಶ್ವರ್‌ 

12:36 PM Jul 08, 2017 | Team Udayavani |

ಉಡುಪಿ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಹಿತಕರ ಘಟನೆಗಳು,ಘರ್ಷಣೆಗಳು ನಡೆಯುಲು ಬಿಜೆಪಿ ನಾಯಕರು, ಕಾರ್ಯಕರ್ತರು ನೀಡದ ಪ್ರಚೋದನೆಯೆ ಕಾರಣ ಎಂದು  ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್‌ ಗಂಭೀರ ಆರೋಪ ಮಾಡಿದ್ದಾರೆ. 

Advertisement

ಶ್ರೀಕೃಷ್ಣ ಮಠಕ್ಕೆ ಶನಿವಾರ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಕೆ.ಸಿ.ವೇಣುಗೋಪಾಲ್‌ ಅವರೊಂದಿಗೆ ಭೇಟಿ ನೀಡಿ  ಪೇಜಾವರ ಶ್ರೀಗಳನ್ನು ಭೇಟಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಜಿಲ್ಲೆಯಲ್ಲಿ ಅಹಿತಕರ ಘಟನೆಗಳು ನಡೆಯಬಾರದು.ಇದು ಸಮಾಜಕ್ಕೆ ಒಳ್ಳೆಯದಲ್ಲ. ಅದನ್ನೇ ಸ್ವಾಮೀಜಿಗಳು ಹೇಳುತ್ತಿದ್ದರು ಎಂದರು. 

ಪೇಜಾವರ ಶ್ರೀಗಳೊಂದಿಗೆ ಮಾತುಕತೆ ನಡೆಸಿದ ಅವರು ಮಠದಲ್ಲಿ ನಡೆದ ಇಫ್ತಾರ್‌ ಕೂಟ ಮತ್ತು ನಮಾಜ್‌ನಲ್ಲಿ ತಪ್ಪಿಲ್ಲ.ಇದಕ್ಕೆ ನಮ್ಮ ಬೆಂಬಲವಿದೆ ಎಂದರು. 

ಭೇಟಿ ವೇಳೆ ಸಚಿವ ಪ್ರಮೋದ್‌ ಮಧ್ವರಾಜ್‌, ಮಾಜಿ ಸಚಿವ,ಶಾಸಕ ವಿನಯ್‌ಕುಮಾರ್‌ ಸೊರಕೆ ಸೇರಿದಂತೆ ಪ್ರಮುಖ ಕಾಂಗ್ರೆಸ್‌ ನಾಯಕರು ಉಪಸ್ಥಿತರಿದ್ದರು. 

Advertisement

Udayavani is now on Telegram. Click here to join our channel and stay updated with the latest news.

Next