Advertisement

ಗಲಭೆಗೆ ಬಿಜೆಪಿ ಕಾರಣ, ತೇಜಸ್ವಿ ಸೂರ್ಯ ಬಚ್ಚಾ

10:49 PM Dec 24, 2019 | Team Udayavani |

ಬೆಂಗಳೂರು: “ಗಲಭೆಗೆ ಬಿಜೆಪಿಯವರೇ ಕಾರಣ. ಆ ಪಕ್ಷದ ನಾಯಕರೇ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್‌ ಖಂಡ್ರೆ ಆರೋಪಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿ, ಶಾಸಕ ಖಾದರ್‌ ಹೇಳಿಕೆಯನ್ನು ಬಿಜೆಪಿಯವರು ಬೇರೆ ರೀತಿಯಲ್ಲಿ ಹೇಳುತ್ತಿದ್ದಾರೆ. ಅಪರಾಧವೆಸಗಿ, ತಪ್ಪು ಮಾಡಿ ಈಗ ಅದನ್ನು ಸಮರ್ಥಿಸಿಕೊಳ್ಳುವ ಪ್ರಯತ್ನವನ್ನು ಬಿಜೆಪಿಯವರು ಮಾಡುತ್ತಿದ್ದಾರೆ. ಇದು ಜನರ ದಾರಿ ತಪ್ಪಿಸುವ ಕೆಲಸ ಎಂದರು.

Advertisement

ಸರ್ಕಾರದ ಅಧೀನದ ಸಂಸ್ಥೆಗಳಿಂದ ತನಿಖೆ ನಡೆದರೆ ಸತ್ಯಾಂಶ ಹೊರಬರಲ್ಲ. ಹೀಗಾಗಿ ಹೈಕೋರ್ಟ್‌ನ ಹಾಲಿ ನ್ಯಾಯಮೂರ್ತಿಗಳಿಂದ ತನಿಖೆ ಆಗಬೇಕು. ಸಂಸದ ತೇಜಸ್ವಿ ಸೂರ್ಯ ಒಬ್ಬ “ಬಚ್ಚಾ’. ಯಾವುದೋ ಹವಾದಲ್ಲಿ ಗೆದ್ದು ಬಂದಿದ್ದಾರೆ. ಜನರ ದಿಕ್ಕು ತಪ್ಪಿಸುವುದನ್ನು ಬಿಟ್ಟು ಮುಂದಾದರೂ ಉತ್ತಮ ರೀತಿಯಲ್ಲಿ ನಡೆದುಕೊಳ್ಳಲಿ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next