Advertisement

BJP-JDS ಮೈತ್ರಿ; ನನಗೆ ಸಂಪೂರ್ಣ ಮಾಹಿತಿ ಇಲ್ಲ: ಪ್ರಹ್ಲಾದ್ ಜೋಶಿ

05:56 PM Sep 11, 2023 | Team Udayavani |

ಹುಬ್ಬಳ್ಳಿ: ಬಿಜೆಪಿ ಮತ್ತು ಜೆಡಿಎಸ್ ನಡುವೆ ಮೈತ್ರಿ ಇನ್ನು ಅಂತಿಮವಾಗಿಲ್ಲ. ಅದರ ಬಗ್ಗೆ ನನಗೆ ಸಂಪೂರ್ಣ ಮಾಹಿತಿ ಇಲ್ಲ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ ಸೋಮವಾರ ಹೇಳಿಕೆ ನೀಡಿದ್ದಾರೆ.

Advertisement

ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಬಿಜೆಪಿ-ಜೆಡಿಎಸ್ ಮೈತ್ರಿ ಸಮರ್ಥನೆ ಮಾಡಿಕೊಂಡಿರುವ ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈತ್ರಿ ಅನಿವಾರ್ಯ ಅಂತ ಬೊಮ್ಮಾಯಿ ಅವರು ಸ್ಥಳೀಯವಾಗಿ ಹೇಳಿರಬಹುದು. ನಾನು ಕೇಂದ್ರದಲ್ಲಿ ಮಂತ್ರಿಯಾಗಿ ನಮ್ಮ ಪಕ್ಷದ ವರಿಷ್ಠರು ಹೇಳುವವರೆಗೆ ನಾನು ನನ್ನ ಅಭಿಪ್ರಾಯ ವ್ಯಕ್ತಪಡಿಸುವುದು ಸರಿಯದಲ್ಲ ಎಂದರು.

ಖಾಸಗಿ ಬಸ್ ಮಾಲಕರು ಅನುಭವಿಸುವ ತೊಂದರೆ ಕುರಿತಂತೆ ಪ್ರತಿಕ್ರಿಯೆ ನೀಡಿ, ಅವರ ಸಮಸ್ಯೆ ನಿವಾರಿಸುವ ಕೆಲಸ ರಾಜ್ಯ ಸರ್ಕಾರದಿಂದ ಆಗಬೇಕು. ಶಕ್ತಿ ಯೋಜನೆಯಿಂದ ಇದರ ಪರಿಣಾಮವಾಗಿ ಅವರಿಗೆ ತೊಂದರೆಯಾಗಿರುವುದು ನಿಜ. ಸಾರಿಗೆ ಸಂಸ್ಥೆಗಳು ನಷ್ಟದಲ್ಲಿದ್ದು, ಸರ್ಕಾರ ದುಡ್ಡು ಕೊಡುತ್ತಿಲ್ಲ. ಆದ್ದರಿಂದ ಈ ಬಗ್ಗೆಯೂ ಸರ್ಕಾರ ಗಮನಹರಿಸಬೇಕು. ಉಚಿತ ಗ್ಯಾರಂಟಿಗಳನ್ನು ಕೊಡುತ್ತಾ ಇದ್ದು, ಮನಬಂದಂತೆ ನಡೆದುಕೊಳುತ್ತಿದ್ದಾರೆ. ಇದು ಸರಿಯಲ್ಲ ಎಂದರು.

ಜಿ-20 ಭಾರತದ 75 ವರ್ಷದ ಇತಿಹಾಸದಲ್ಲಿ ಬಾರಿ ದೊಡ್ಡ ಮೈಲಿಗಲ್ಲಾಗಿದ್ದು, ಮುಖ್ಯವಾಗಿ ಭಿನ್ನಾಭಿಪ್ರಾಯ ಬರದಂತೆ ತೀರ್ಮಾನ ಮಾಡಿದ್ದೆ ಬಹು ದೊಡ್ಡ ಸಾಧನೆಯಾಗಿದೆ. ಭಾರತದ ನೇತೃತ್ವವನ್ನು ವಿದೇಶಗಳು ಒಪ್ಪುತ್ತಿವೆ. ಇದು ಸ್ಪಷ್ಟ ಸಂಕೇತವಾಗಿದೆ ಎಂದರು.

ಆಫ್ರಿಕನ್ ಒಕ್ಕೂಟ ಒಗ್ಗೂಡಿಸಲು ಭಾರತದ ಪ್ರಸ್ತಾವನೆ ಬಂದಾಗ ಇದನ್ನು ಸ್ವೀಕಾರ ಮಾಡಿದ್ದಾರೆ. ಮಧ್ಯ ಪ್ರಾಚ್ಯ ಹೊಸ ಕಾರಿಡಾರ್ ನಿರ್ಮಾಣಕ್ಕೆ ಸೂಚಿಸಿವೆ. ಭಾರತ ಎಲ್ಲಾ ಸಲಹೆಗಳನ್ನು ಮಾನ್ಯ ಮಾಡಿದ್ದಾರೆ. ಎಲ್ಲವೂ ಅಚ್ಚುಕಟ್ಟಾಗಿ ನಡೆದಿದೆ. ಆದರೆ ಕಾಂಗ್ರೆಸ್ ಪಕ್ಷಕ್ಕೆ ಹಾಗೂ ಆ ಪಕ್ಷದ ನಾಯಕರಾದ ರಾಹುಲ್ ಗಾಂಧಿ, ಜೈರಾಮ ರಮೇಶ ಅವರಿಗೆ ಎಂತಹ ದರಿದ್ರತೆ ಬಂದಿದೆ ಎಂದರೆ, ಮಳೆ ನೀರು ನಿಂತಿರುವುದನ್ನು ಟ್ವೀಟ್ ಮಾಡುತ್ತಾರೆ. ಇಡೀ ಜಗತ್ತು ಭಾರತ ಹೊಗಳುತ್ತಿದೆ. ಆದರೆ ಕಾಂಗ್ರೆಸ್ ಮಾತ್ರ ತೆಗಳುತ್ತಿದೆ. ಇದು ಮಾನಸಿಕ ರೋಗ. ದೇಶಕ್ಕೆ ಒಳ್ಳೆಯದಾದರೆ ಅದನ್ನು ಸಹಿಸೋಕೆ ಆಗದ ಸ್ಥಿತಿಗೆ ಕಾಂಗ್ರೆಸ್ ನವರು ಬಂದು ತಲುಪಿದ್ದಾರೆ. ಪ್ರಧಾನಿ ಮೋದಿಯವರನ್ನು ವಿರೋಧ ಮಾಡುವ ಭರದಲ್ಲಿ ದೇಶವನ್ನೇ ವಿರೋಧ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕರ ವಿರುದ್ಧ ಜೋಶಿ ಹರಿಹಾಯ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next