Advertisement

BJP-JDS ಮೈತ್ರಿಯಿಂದ ಕಾಂಗ್ರೆಸ್ ಪಕ್ಷಕ್ಕೆ ಲಾಭ: ಎಚ್.ವಿಶ್ವನಾಥ್

07:28 PM Sep 10, 2023 | Team Udayavani |

ವಿಜಯಪುರ : ಜೆಡಿಎಸ್ ಪಕ್ಷದೊಂದಿಗೆ ಚುನಾವಣಾ ಪೂರ್ವ ಮೈತ್ರಿ ಹಾಗೂ ಸ್ಥಾನ ಹಂಚಿಕೆ ಆಗಿರುವುದಾಗಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಹೇಳಿದ್ದಾರೆ, ಎರಡೂ ಪಕ್ಷಗಳ ಮೈತ್ರಿಯಿಂದ ಕಾಂಗ್ರೆಸ್ ಪಕ್ಷಕ್ಕೆ ಲಾಭವಾಗಲಿದೆ ಎಂದು ಮೇಲ್ಮನೆ ಹಿರಿಯ ಶಾಸಕರಾದ ಶಫರ್ಡ್ಸ್ ಇಂಡಿಯಾ ಇಂಟರನ್ಯಾಶನಲ್ ಸಂಘಟನೆಯ ಸಂಸ್ಥಾಪಕ ಅಧ್ಯಕ್ಷ ಎಚ್.ವಿಶ್ವನಾಥ್ ಅಭಿಪ್ರಾಯಪಟ್ಟರು.

Advertisement

ಭಾನುವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ರಾಜಕೀಯವಾಗಿ ಪರಸ್ಪರ ಹೊಂದಾಣಿ ಮಾಡಿಕೊಳ್ಳುವ ವಿಷಯವೇನೂ ಹೊಸದಲ್ಲ. ಕರ್ನಾಟಕಕ್ಕೂ ಮೊದಲಲ್ಲ. ಆದರೆ ರಾಜ್ಯದ ಮತದಾರರು ಈ ಮೈತ್ರಿಯಿನ್ನು ಹೇಗೆ ಸ್ವೀಕರಿಸುತ್ತಾರೆ ಎಂಬುದು ಚುನಾವಣೆ ಫಲಿತಾಂಶ ಹೊರ ಬಿದ್ದಾಗ ತಿಳಿಯಲಿದೆ ಎಂದರು.

ಕುಟುಂಬ ಸದಸ್ಯರಿಗೆ ಯಾವ್ಯಾವ ಕ್ಷೇತ್ರದಲ್ಲಿ ಟಿಕೆಟ್ ಕೊಡಬೇಕು ಎಂದು ಚರ್ಚೆ ನಡೆಸಿದ್ದಾರೆ. ಈ ಹಿಂದೆ ದಲಿತ, ಮುಸ್ಲಿಂ ಸಮುದಾಯಕ್ಕೆ ಟಿಕೆಟ್ ಕೇಳಿದರೂ ಕೊಡಲಿಲ್ಲ. ಆಗ ಗೆಜ್ಜೆ ಪೂಜೆ, ಈಗ ನಿಜವಾದ ಸೀರಿಯಲ್. ಜಡಿಎಸ್ ಪಕ್ಷ ಜಾತ್ಯತೀತ ಎಂದು ಇರಿಸಿಕೊಂಡಿರುವುದು ಹೆಸರಿಗೆ ಮಾತ್ರ ಎಂದು ವಾಗ್ದಾಳಿ ನಡೆಸಿದರು.

ಏಕೆಂದರೆ ಲೋಕಸಭೆ ಕಳೆದ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದೊಂದಿಗೆ ಕಾಂಗ್ರೆಸ್ ಮೈತ್ರಿ ಮಾಡಿಕೊಂಡ ಕಾರಣ ಬಿಜೆಪಿ ಪಕ್ಷಕ್ಕೆ ಲಾಭವಾಯ್ತು. ಇದೀಗ ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಮಾಡಿಕೊಂಡಿರುವುದು ಪರಿಣಾಮ ಸಕಾರಾತ್ಮಕವೋ ಅಥವಾ ನಕಾರಾತ್ಮಕವೋ ಎಂಬುದನ್ನು ಈಗಲೇ ಹೇಳಲಾಗದು. ಆದರೆ ರಾಜ್ಯದ ಮಟ್ಟಿಗೆ ಕಾಂಗ್ರೆಸ್ ಪಕ್ಷಕ್ಕೆ ಲಾಭ ತರಲಿ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸದ್ಯಕ್ಕೆ ನಾನು ಯಾವುದೇ ರಾಜಕೀಯ ಪಕ್ಷದಲ್ಲಿಲ್ಲ. ಹಾಗಂತ ನಾನು ರಾಜಕೀಯ ನಿವೃತ್ತಿ ಆಗುವುದಿಲ್ಲ. ನನ್ನ ಜೀವಿತಾವಧಿಯುದ್ದಕ್ಕೂ ಸಕ್ರೀಯ ರಾಜಕೀಯ ಮಾಡುತ್ತೇನೆ ಎಂದರು.

Advertisement

ಸಚಿವ ಸ್ಥಾನ ಸಿಗದಿರುವ ಬಗ್ಗೆ ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ ಬಹಿರಂಗವಾಗಿ ನೋವು ಹೊರ ಹಾಕಬಾರದಿತ್ತು. ಅವರಿಗೆ ನೋವು ಇರವುದು ಸಹಜವೇ ಆದರೂ ಬಹಿರಂಗ ಹೇಳಿಕೆ ಸರಿಯಲ್ಲ. ಏಕೆಂದರೆರ ಈಡಗ ಸಮುದಾಯಕ್ಕೆ ಕಾಂಗ್ರೆಸ್ ಪಕ್ಷ ನೀಡಿದಷ್ಟು ಅವಕಾಶವನ್ನು ಬೇರೆ ಯಾವುದೇ ಪಕ್ಷ ನೀಡಿಲ್ಲ ಎಂದರು.

ರಾಜಕೀಯ ಶಕ್ತಿಗಾಗಿ ಶಫರ್ಡ್ಸ್ ಇಂಡಿಯಾ ಇಂಟರನ್ಯಾಶನಲ್ ಸಂಘಟನೆಯನ್ನು 2014 ರಲ್ಲೇ ಹುಟ್ಟುಹಾಕಲಾಗಿದೆ. ನಾನು ಲೋಕಸಭೆ ಸದಸ್ಯನಾಗಿದ್ದಾಗಲೇ ರಾಷ್ಟ್ರ ವಿವಿಧ ರಾಜ್ಯಗಳಲ್ಲಿ ಹರಿದು-ಹಂಚಿಹೋಗಿರುವ ಕುರುಗಾಯಿ ಸಮುದಾಯದ ಸಂಘಟನೆಗಾಗಿ ಈ ಸಂಸ್ಥೆಯನ್ನು ಸ್ಥಾಪಿಸಲಾಗಿದೆ. ಇದು ರಾಜಕೀಯ ಕಾರಣಕ್ಕೆ ಈಗ ಹುಟ್ಟುಹಾಕಿದ ಸಂಘಟನೆಯಲ್ಲ ಎಂದು ಸ್ಪಷ್ಟಪಡಿಸಿದರು.

ರಾಜಕೀಯವಾಗಿ ದುರ್ಬಲವಾಗಿರುವ ಕುರಿಗಾಯಿ ಸಮುದಾಯದ ಸಂಘಟನೆಗಾಗಿ ರಾಷ್ಟ್ರ ಮಟ್ಟದಲ್ಲಿ ಸಂಘಟನೆ ಮಾಡುತ್ತ ಬರಲಾಗಿದೆ. ಈಗಾಗಲೇ ದೇಶದ ಹಲವು ರಾಜ್ಯಗಳಲ್ಲಿ 8 ಸಮಾವೇಶ ಮಾಡಿದ್ದು, ಇದೀಗ ಕರ್ನಾಟಕದ ಬೆಳಗಾವಿ ಜಿಲ್ಲೆಯಲ್ಲಿ ಆಕ್ಟೋಬರ್ 3 ರಂದು 9ನೇ ರಾಷ್ಟ್ರೀಯ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದರು.

ಪರಿಶಿಷ್ಟ ಪಂಗಡದ ಸಮುದಾಯದ ಪಟ್ಟಿಗೆ ಸೇರಿಸುವ ಕುರಿತು ಸಮಾವೇಶದಲ್ಲಿ ಕೇಂದ್ರದ ಮೇಲೆ ಒತ್ತಡ ಹೇರಲು ಚರ್ಚೆ ನಡೆಯಲಿದೆ. ಇಂತ ಸಮಾವೇಶದ ಕುರಿಗಾಯಿ ವೃತ್ತಿಯ ನಮ್ಮ ಸಮುದಾಯವನ್ನು ಸಂಘಟಿಸುವ ಜೊತೆಗೆ ರಾಜಕೀಯ ಜಾಗೃತಿ ಹಾಗೂ ರಾಜಕೀಯ ಶಕ್ತಿ ಪಡೆಯುವ ಉದ್ದೇಶ ಹೊಂದಲಾಗಿದೆ ಎಂದರು.

ಡಾ.ಬಿ.ಆರ್.ಅಂಬೇಡ್ಕರ್ ಅವರು ಶಿಕ್ಷಣ ಹಾಗೂ ರಾಜಕೀಯ ಶಕ್ತಿ ದೊರಕದ ಹೊರತಾಗಿ ಹಿಂದುಳಿದ ಸಮುದಾಯಗಳು ಬಲವರ್ಧನೆ ಆಗಲು ಸಾಧ್ಯವಿಲ್ಲ. ಸಾಮಾಜಿಕ ನ್ಯಾಯಕ್ಕಾಗಿ ರಾಜಕೀಯ ಅಧಿಕಾರ ಹಂಚಿಕೆಯ ಅಗತ್ಯವಿದೆ ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ಹೀಗಾಗಿಯೇ ನಮ್ಮ ಸಂಘಟನೆಯನ್ನು ರಾಷ್ಟ್ರೀಯ ಮಟ್ಟದಲ್ಲಿ ಬಲಗೊಳಿಸಲು ಯೋಜಿಸಿದ್ದೇವೆ ಎಂದರು.

ರಾಷ್ಟ್ರ ಮಟ್ಟದಲ್ಲಿ ಸುಮಾರು 12 ಕೋಟಿ ಸಮುದಾಯದ ಜನಸಂಖ್ಯೆ ಇರುವ ಕುರುಬ ಸಮುದಾಯ ಬೇರೆ ಬೇರೆ ಹೆಸರುಗಳಿಂದ ಕರೆಯಲ್ಪಡುತ್ತಿದೆ. ಕೇಂದ್ರ ಹಾಗೂ ವಿವಿಧ ರಾಜ್ಯಗಳಲ್ಲಿ ಸಚಿವರಾಗಿ, ರಾಜ್ಯಪಾಲರಂಥ ಹುದ್ದೆ ಮಾತ್ರ ಅಲಂಕರಿಸಲು ಸಾಧ್ಯವಾಗಿದೆ. ಆದರೆ ಕರ್ನಾಟಕದ ಮೂಲಕ ಸಿದ್ಧರಾಮಯ್ಯ ಅವರು ರಾಷ್ಟ್ರ ಮಟ್ಟದಲ್ಲಿ ಮುಖ್ಯಮಂತ್ರಿ ಸ್ಥಾನ ಅಲಂಕರಿಸಿದ ಏಕೈಕ ನಾಯಕ. ಹೀಗಾಗಿ ಬೆಳಗಾವಿ ಅಧಿವೇಶನದಲ್ಲಿ ಅವರಿಗಾಗಿ ಅಭಿನಂದನಾ ಸಮಾರಂಭ ನಡೆಲಿದೆ ಎಂದರು.

ಮಾಜಿ ಸಚಿವರಾದ ಸಂಘಟನೆಯ ರಾಷ್ಟ್ರೀಯ ಉಪಾಧ್ಯಕ್ಷ ಎಚ್.ಎಂ.ರೇವಣ್ಣ, ರಾಜ್ಯಾಧ್ಯಕ್ಷ ಸಿ.ಎಂ.ನಾಗರಾಜ, ಮಹಿಳಾ ರಾಜ್ಯಾಧ್ಯಕ್ಷೆ ಪ್ರೇಮಲತಾ, ಸೋಮನಾಥ ಕಳ್ಳಿಮನಿ, ರವಿ ಕಿತ್ತೂರ ಸೇರಿದಂತೆ ಇತರರು ಉಪ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next