Advertisement

ಬಿಜೆಪಿ ಜತೆ ಜೆಡಿಎಸ್‌ ವಿಲೀನ ಆಗಲಿದೆ: ಲಕ್ಷ್ಮಣ್‌

03:41 PM Dec 05, 2021 | Team Udayavani |

ಮೈಸೂರು: ತಮಗೆ ಬಂದಿರುವ ಮಾಹಿತಿ ಪ್ರಕಾರ ಜೆಡಿಎಸ್‌ ಪಕ್ಷವು ಬಿಜೆಪಿ ಜೊತೆ ವಿಲೀನವಾಗಲಿದೆ. ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಹಾಗೂ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಮಧ್ಯೆ ಮಾತುಕತೆ ನಡೆದಿದೆ ಎಂದು ಕಾಂಗ್ರೆಸ್‌ ಸಮಿತಿ ವಕ್ತಾರ ಎಂ. ಲಕ್ಷ್ಮಣ್‌ ತಿಳಿಸಿದರು.

Advertisement

ರಾಜ್ಯದ ಜಾತ್ಯತೀತ ಜನತಾದಳ ಪಕ್ಷವು ತನ್ನ ನೀತಿ, ನಿಲುವು, ತತ್ವ , ಸಿದ್ದಾಂತಗಳು ಏನೆಂಬುದನ್ನು ಸ್ಪಷ್ಟಪಡಿಸಬೇಕು. ಜೆಡಿಎಸ್‌ ಪಕ್ಷವು ಜಾತ್ಯತೀತವಾದಿಗಳೇ? ಕೋಮುವಾದಿಗಳೇ? ಇದನ್ನು ಅವರೇ ತಿಳಿಸಬೇಕು. ಜೆಡಿಎಸ್‌ ಪಕ್ಷವು ಫ್ಯಾಮಿಲಿ ಟ್ರಸ್ಟ್‌ ಪಕ್ಷವಾಗಿದೆ. ಬಿಜೆಪಿಯ ಬಿ ಟೀಂ ಜೆಡಿಎಸ್‌ ಆಗಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ಟೀಕಿಸಿದರು.

ಇದನ್ನೂ ಓದಿ:- ಜಗತ್ತಿನ ಎಲ್ಲ ಭಾಷೆಗಳಿಗೆ ಕನ್ನಡವೇ ತಾಯಿ: ಶೆಟ್ಟಿ

ಸಿಂದಗಿ, ಹಾನಗಲ್‌ ಉಪ ಚುನಾವಣೆ ವೇಳೆ ಆರ್‌ಎಸ್‌ಎಸ್‌ ಅನ್ನು ಕಟುವಾಗಿ ಟೀಕಿಸುತ್ತಿದ್ದ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಅವರು ಈಗೇಕೆ ಆರ್‌ಎಸ್‌ಎಸ್‌ ಬಗ್ಗೆ ಮೌನವಾಗಿದ್ದಾರೆ ಎಂದು ಪ್ರಶ್ನಿಸಿದರು. ಮೈಸೂರು-ಚಾಮರಾಜನಗರ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್ತಿಗೆ ನಡೆಯುತ್ತಿರುವ ಚುನಾವಣೆಯಲ್ಲಿ ಮತದಾರರಿಗೆ ಬೆಳ್ಳಿ ನಾಣ್ಯದ ಆಮಿಷ ಒಡ್ಡಲಾಗುತ್ತಿದೆ ಎಂದು ಲಕ್ಷ್ಮಣ್‌ ಆರೋಪಿಸಿದರು.

ಈ ಬೆಳ್ಳಿ ನಾಣ್ಯದಲ್ಲಿ ಮಂಜುನಾಥ ಸ್ವಾಮಿ ದೇವರ ಚಿತ್ರವಿದೆ. ಬಿಜೆಪಿ ಅಥವಾ ಜೆಡಿಎಸ್‌ ಯಾವ ಪಕ್ಷದವರು ಹೀಗೆ ಬೆಳ್ಳಿ ನಾಣ್ಯದ ಆಮಿಷವೊಡ್ಡುತ್ತಿದ್ದಾರೆ ಎಂಬುದು ಗೊತ್ತಾಗಿಲ್ಲ. ಈ ಕುರಿತು ಚುನಾವಣಾಧಿಕಾರಿಗಳಿಗೆ ದೂರು ನೀಡುವುದಾಗಿ ಅವರು ತಿಳಿಸಿದರು. ಪೊಲೀಸರು ಎಂಜಲು ಕಾಸು ತಿಂದು ಬದುಕುತ್ತಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಹೇಳಿಕೆಗೆ ಲಕ್ಷ್ಮಣ್‌ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next