Advertisement

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

10:27 PM Mar 28, 2024 | Team Udayavani |

ಮಂಡ್ಯ: ನಗರದಲ್ಲಿ ನಡೆದ ಬಿಜೆಪಿ-ಜೆಡಿಎಸ್‌ ಸಮನ್ವಯ ಸಮಿತಿ ಸಭೆ ವೇದಿಕೆಯಲ್ಲಿ ಆಸನದ ಕೊರತೆಯಾಗಿದ್ದರಿಂದ ಜಿಲ್ಲೆಯ ಜೆಡಿಎಸ್‌ ಶಾಸಕ, ಮಾಜಿ ಶಾಸಕರು ವೇದಿಕೆ ಕೆಳಗೆ ಕುಳಿತ ಘಟನೆ ನಡೆಯಿತು.

Advertisement

ವೇದಿಕೆ ಮೇಲೆ ಬಿಜೆಪಿ ಮುಖಂಡರಿಗೆ ಕುಳಿತುಕೊಳ್ಳಲು ಅವಕಾಶ ಮಾಡಿಕೊಟ್ಟು ಜೆಡಿಎಸ್‌ ನಾಯಕರು ಕೆಳಗೆ ಕುಳಿತರು. ವಿಜಯೇಂದ್ರ, ಅಶ್ವತ್ಥನಾರಾಯಣ, ಕೆ.ಸಿ.ನಾರಾಯಣ ಗೌಡ, ರಾಮದಾಸ್‌, ಜಿಲ್ಲಾಧ್ಯಕ್ಷ ಇಂದ್ರೇಶ್‌ ಸಹಿತ ಬಿಜೆಪಿಯ ಬಹುತೇಕ ಮುಖಂಡರು ವೇದಿಕೆಯಲ್ಲಿ ಆಸೀನರಾಗಿದ್ದರು. ಅವರ ಜತೆ ಎಚ್‌.ಡಿ.ಕುಮಾರಸ್ವಾಮಿ, ಜಿ.ಟಿ.ದೇವೇಗೌಡ, ಸಾ.ರಾ.ಮಹೇಶ್‌ ವೇದಿಕೆಯಲ್ಲಿದ್ದರು. ಉಳಿದ ಪ್ರಮುಖರಾದ ಜೆಡಿಎಸ್‌ ಶಾಸಕ ಎಚ್‌.ಟಿ.ಮಂಜು, ಮಾಜಿ ಸಚಿವ ಸಿ.ಎಸ್‌.ಪುಟ್ಟರಾಜು, ಮಾಜಿ ಶಾಸಕರಾದ ಕೆ.ಅನ್ನದಾನಿ, ಸುರೇಶ್‌ಗೌಡ, ರವೀಂದ್ರ ಶ್ರೀಕಂಠಯ್ಯ, ಬಿ.ಆರ್‌.ರಾಮಚಂದ್ರು ಮೊದಲಾದವರು ಕೆಳಗೆ ಕುಳಿತರು.

Advertisement

Udayavani is now on Telegram. Click here to join our channel and stay updated with the latest news.

Next