Advertisement

BJP-ಜೆಡಿಎಸ್‌ ಹೊಂದಾಣಿಕೆ ಸೂಕ್ತ: ಯೋಗೇಶ್ವರ್‌

10:50 PM Sep 06, 2023 | Team Udayavani |

ರಾಮನಗರ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್‌ ಹೊಂದಾಣಿಕೆ ಸೂಕ್ತವಾಗಿದ್ದು, ರಾಜ್ಯದಲ್ಲಿ ಕಾಂಗ್ರೆಸ್‌ ಸೋಲಿಸಲು ಸೂಕ್ತ ರಾಜಕೀಯ ತೀರ್ಮಾನ ತೆಗೆದುಕೊಳ್ಳಬೇಕು ಎಂದು ಜೆಡಿಎಸ್‌ ವರಿಷ್ಠರಲ್ಲಿ ಕೋರಿಕೊಳ್ಳುವುದಾಗಿ ಬಿಜೆಪಿ ನಾಯಕ, ಎಂಎಲ್‌ಸಿ ಸಿ.ಪಿ.ಯೋಗೇಶ್ವರ್‌ ತಿಳಿಸಿದ್ದಾರೆ.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ನನ್ನ ವೈಯಕ್ತಿಕ ಅಭಿಪ್ರಾಯ. ಎರಡೂ ಪಕ್ಷಗಳು ಚುನಾವಣ ಪೂರ್ವ ಹೊಂದಾಣಿಕೆ ಮಾಡಿಕೊಳ್ಳುವುದು ಅತ್ಯಾವಶ್ಯಕ. ಈ ನಿಟ್ಟಿನಲ್ಲಿ ಎಲ್ಲ ಪ್ರಯತ್ನಗಳು ನಡೆಯುತ್ತಿದ್ದು, ಸದ್ಯದಲ್ಲೇ ನಾನು ಜೆಡಿಎಸ್‌ ವರಿಷ್ಠರನ್ನು ಭೇಟಿ ಮಾಡಿ ಈ ಸಂಗತಿಯನ್ನು ಮನವರಿಕೆ ಮಾಡಿಕೊಡುತ್ತೇನೆ ಎಂದರು. ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ನಾನು ಅಥವಾ ಡಾ| ಅಶ್ವತ್ಥನಾರಾಯಣ ಅಭ್ಯರ್ಥಿಯಾಗಬಹುದು, ಇಲ್ಲವೇ ಕಳೆದ ಬಾರಿ ಸ್ಪರ್ಧಿಸಿದ್ದ ಅಶ್ವತ್ಥ ನಾರಾಯಣ ಗೌಡ ಸಹ ಅಭ್ಯರ್ಥಿಯಾಗಬಹುದು ಎಂದು ಯೋಗೇಶ್ವರ್‌ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next