Advertisement

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

10:43 PM Mar 28, 2024 | Team Udayavani |

ಬೆಂಗಳೂರು: ಇದೇ ಮೊದಲ ಬಾರಿಗೆ ಬಿಜೆಪಿ-ಜೆಡಿಎಸ್‌  “ಜಂಟಿ ಸಮರಾಭ್ಯಾಸ’ಕ್ಕೆ ವೇದಿಕೆ ಸಿದ್ಧವಾಗಿದ್ದು, ಶುಕ್ರವಾರ ಬೆಂಗಳೂರಿನ ಖಾಸಗಿ ಹೊಟೇಲ್‌ನಲ್ಲಿ ಉಭಯ ಪಕ್ಷದ ಧುರೀಣರು ಒಂದೇ ವೇದಿಕೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ.

Advertisement

ಬಿಜೆಪಿ ರಾಜ್ಯ ಚುನಾವಣ ಉಸ್ತುವಾರಿ ರಾಧಾ ಮೋಹನ್‌ ಅಗರ್ವಾಲ್‌, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ,  ವಿಪಕ್ಷ ನಾಯಕ ಆರ್‌.ಅಶೋಕ್‌, ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ, ಹಳೆ ಮೈಸೂರು ಭಾಗದ ಒಕ್ಕಲಿಗ ನಾಯಕರು ಹಾಗೂ ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಮೊದಲಾದವರು ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಮೈತ್ರಿ ಬಳಿಕ ಇದೇ ಮೊದಲ ಬಾರಿಗೆ ಎರಡು ಪಕ್ಷದ ನಾಯಕರು ಚುನಾವಣೆ ಎದುರಿಸುವುದು ಹೇಗೆ ಎಂಬ ಬಗ್ಗೆ ಚರ್ಚಿಸಲು ಸಭೆ ಸೇರುತ್ತಿದ್ದಾರೆ. ರಾಜ್ಯ ನಾಯಕರು ತಮಗೆ ಸೂಕ್ತ ಗೌರವ ನೀಡುತ್ತಿಲ್ಲ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಬಹಿರಂಗವಾಗಿ ಬುಸುಗುಟ್ಟಿದ ಬಳಿಕ ವರಿಷ್ಠರ ಸೂಚನೆ ಅನ್ವಯ ಈ ಸಭೆ ನಡೆಸಲಾಗುತ್ತಿದೆ.

ಮೂಲಗಳ ಪ್ರಕಾರ ವಿಶೇಷವಾಗಿ ಹಳೆ ಮೈಸೂರು ಭಾಗವನ್ನು ಗಮನದಲ್ಲಿಟ್ಟುಕೊಂಡು ಎರಡು ಪಕ್ಷಗಳಿಂದ ತಲಾ 50 ಸದಸ್ಯರನ್ನು ಒಳಗೊಂಡ ಸಮನ್ವಯ ಸಮಿತಿಯನ್ನು ರಚಿಸಲಾಗುತ್ತಿದೆ. ಎಲ್ಲ ಲೋಕಸಭಾ ಕ್ಷೇತ್ರದಲ್ಲೂ ಸಮನ್ವಯ ಕೊರತೆಯಾಗದಂತೆ ನೋಡಿಕೊಳ್ಳುವುದು ಈ ಸಮಿತಿಯ ಉದ್ದೇಶವಾಗಿದೆ ಎಂದು ತಿಳಿದು ಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next